ರಾಜ್ಯದಲ್ಲಿ ಬರಗಾಲ ಬಂದು ರೈತರನ್ನ ಸಂಕಷ್ಟಕ್ಕೆ ದೂಡಿದೆ. ಸಂಕಷ್ಟದಲ್ಲಿರುವ ರೈತರನ್ನು ಪಾರುಮಾಡುವುದನ್ನ ಬಿಟ್ಟು ಕೇಂದ್ರ ಸರ್ಕಾರವನ್ನ ಟೀಕೆ ಟಿಪ್ಪಣಿ ಮಾಡುತ್ತಾ ರಾಜ್ಯ ಕಾಂಗ್ರೆಸ್ ಕಾಲಹರಣ ಮಾಡಲಾಗುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.
ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದಿಲ್ಲ. ರಾಜ್ಯದ ಪರವಾಗಿ ಮೋದಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಹೇಳುವುದನ್ನ ಬಿಟ್ಟು, ಬರ ವೀಕ್ಷಣೆಗೆ ತಂಡ ರಚನೆ ಮಾಡಿ, ತಂಡಗಳಿಂದ ವರದಿ ಪಡೆದು ಸೂಕ್ತ ಪರಿಹಾರ ಒದಗಿಸುವಲ್ಲಿ ನಿರತರಾಗಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ನಂತರ ಸಚಿವ ಕೃಷ್ಣ ಬೈರೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸುಮ್ಮನೆ ಕೇಂದ್ರ ಸರ್ಕಾರವನ್ನೇಕೆ ದೂರುತ್ತೀರಿ?, ನೀವು ಇರುವುದು ಏನಕ್ಕೆ?, ನೀವು ಏನೆ ಮಾತನಾಡಿದರೂ ಜನ ನಂಬುತ್ತಾರೆ ಎಂದು ಭಾವಿಸಬೇಡಿ, ರಾಜ್ಯಾದ್ಯಂತ ಬಿಜೆಪಿ ಹದಿನೇಳು ತಂಡವಾಗಿ ಬರ ಸಮೀಕ್ಷೆ ಮಾಡುತ್ತಿದೆ ನಾವು ಎಲ್ಲಿಗೆ ಹೋದರು ಕೂಡಾ ಡಿಸಿ, ತಹಶಿಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯು ಸಹ ಬರ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ನಿಕ್ಷ್ರಿಯವಾಗಿದೆ. ಹಾಗಾಗಿ ನಾವು ಬರ ಅಧ್ಯಯನ ಮಾಡುತ್ತಿದ್ದೇವೆ ಎಂದು ಹೇಳಿದರು.
ಹತ್ತು ಸಾವಿರ ಕೋಟಿ ಬರ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಿ ಎಂದು ರಾಜ್ಯ ಸರ್ಕಾರದ ಮುಂದೆ ಬಿಜೆಪಿ ಬೇಡಿಕೆ ಇಟ್ಟಿದೆ. ಕೇಂದ್ರದ ಜೊತೆ ನಾವು ಮಾತಾಡುವುದಾದರೆ ನೀವು ಇರುವುದು ಏನಕ್ಕೇ?. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಮಂತ್ರಿ ಇರುವುದಾದರೂ ಏಕೆ? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ತೆಲಂಗಾಣಕ್ಕೆ ಪ್ರಚಾರಕ್ಕಾಗಿ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ? ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ ಎಂದು ಗುಡುಗಿದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…