ಚುನಾವಣ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ?: ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ- ರಾಜ್ಯ ಸರ್ಕಾರಕ್ಕೆ ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ‌ ಸಲಹೆ

ರಾಜ್ಯದಲ್ಲಿ ಬರಗಾಲ ಬಂದು ರೈತರನ್ನ ಸಂಕಷ್ಟಕ್ಕೆ ದೂಡಿದೆ. ಸಂಕಷ್ಟದಲ್ಲಿರುವ ರೈತರನ್ನು ಪಾರುಮಾಡುವುದನ್ನ ಬಿಟ್ಟು ಕೇಂದ್ರ ಸರ್ಕಾರವನ್ನ ಟೀಕೆ ಟಿಪ್ಪಣಿ ಮಾಡುತ್ತಾ ರಾಜ್ಯ ಕಾಂಗ್ರೆಸ್ ಕಾಲಹರಣ ಮಾಡಲಾಗುತ್ತಿರುವುದು ಎಷ್ಟರ‌ಮಟ್ಟಿಗೆ ಸರಿ? ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಬರ ಪರಿಹಾರ‌ ಬಂದಿಲ್ಲ. ರಾಜ್ಯದ ಪರವಾಗಿ ಮೋದಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ‌ ಎಂದು ಹೇಳುವುದನ್ನ ಬಿಟ್ಟು, ಬರ ವೀಕ್ಷಣೆಗೆ ತಂಡ ರಚನೆ ಮಾಡಿ, ತಂಡಗಳಿಂದ ವರದಿ ಪಡೆದು ಸೂಕ್ತ ಪರಿಹಾರ ಒದಗಿಸುವಲ್ಲಿ ನಿರತರಾಗಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ನಂತರ ಸಚಿವ ಕೃಷ್ಣ ಬೈರೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸುಮ್ಮನೆ ಕೇಂದ್ರ ಸರ್ಕಾರವನ್ನೇಕೆ ದೂರುತ್ತೀರಿ?, ನೀವು ಇರುವುದು ಏನಕ್ಕೆ?, ನೀವು ಏನೆ ಮಾತನಾಡಿದರೂ ಜನ ನಂಬುತ್ತಾರೆ ಎಂದು ಭಾವಿಸಬೇಡಿ, ರಾಜ್ಯಾದ್ಯಂತ ಬಿಜೆಪಿ ಹದಿನೇಳು ತಂಡವಾಗಿ ಬರ ಸಮೀಕ್ಷೆ ಮಾಡುತ್ತಿದೆ‌ ನಾವು ಎಲ್ಲಿಗೆ ಹೋದರು ಕೂಡಾ ಡಿಸಿ, ತಹಶಿಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯು ಸಹ ಬರ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ನಿಕ್ಷ್ರಿಯವಾಗಿದೆ. ಹಾಗಾಗಿ ನಾವು ಬರ ಅಧ್ಯಯನ ಮಾಡುತ್ತಿದ್ದೇವೆ ಎಂದು ಹೇಳಿದರು.

ಹತ್ತು ಸಾವಿರ ಕೋಟಿ ಬರ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಿ ಎಂದು ರಾಜ್ಯ ಸರ್ಕಾರದ ಮುಂದೆ ಬಿಜೆಪಿ ಬೇಡಿಕೆ ಇಟ್ಟಿದೆ. ಕೇಂದ್ರದ ಜೊತೆ ನಾವು ಮಾತಾಡುವುದಾದರೆ ನೀವು ಇರುವುದು ಏನಕ್ಕೇ?. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಮಂತ್ರಿ ಇರುವುದಾದರೂ ಏಕೆ? ಎಂದು‌ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ತೆಲಂಗಾಣಕ್ಕೆ ಪ್ರಚಾರಕ್ಕಾಗಿ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ? ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ ಎಂದು ಗುಡುಗಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

12 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

13 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

19 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago