ಚುನಾವಣ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ?: ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ- ರಾಜ್ಯ ಸರ್ಕಾರಕ್ಕೆ ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ‌ ಸಲಹೆ

ರಾಜ್ಯದಲ್ಲಿ ಬರಗಾಲ ಬಂದು ರೈತರನ್ನ ಸಂಕಷ್ಟಕ್ಕೆ ದೂಡಿದೆ. ಸಂಕಷ್ಟದಲ್ಲಿರುವ ರೈತರನ್ನು ಪಾರುಮಾಡುವುದನ್ನ ಬಿಟ್ಟು ಕೇಂದ್ರ ಸರ್ಕಾರವನ್ನ ಟೀಕೆ ಟಿಪ್ಪಣಿ ಮಾಡುತ್ತಾ ರಾಜ್ಯ ಕಾಂಗ್ರೆಸ್ ಕಾಲಹರಣ ಮಾಡಲಾಗುತ್ತಿರುವುದು ಎಷ್ಟರ‌ಮಟ್ಟಿಗೆ ಸರಿ? ಎಂದು ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಬರ ಪರಿಹಾರ‌ ಬಂದಿಲ್ಲ. ರಾಜ್ಯದ ಪರವಾಗಿ ಮೋದಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ‌ ಎಂದು ಹೇಳುವುದನ್ನ ಬಿಟ್ಟು, ಬರ ವೀಕ್ಷಣೆಗೆ ತಂಡ ರಚನೆ ಮಾಡಿ, ತಂಡಗಳಿಂದ ವರದಿ ಪಡೆದು ಸೂಕ್ತ ಪರಿಹಾರ ಒದಗಿಸುವಲ್ಲಿ ನಿರತರಾಗಿ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ನಂತರ ಸಚಿವ ಕೃಷ್ಣ ಬೈರೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸುಮ್ಮನೆ ಕೇಂದ್ರ ಸರ್ಕಾರವನ್ನೇಕೆ ದೂರುತ್ತೀರಿ?, ನೀವು ಇರುವುದು ಏನಕ್ಕೆ?, ನೀವು ಏನೆ ಮಾತನಾಡಿದರೂ ಜನ ನಂಬುತ್ತಾರೆ ಎಂದು ಭಾವಿಸಬೇಡಿ, ರಾಜ್ಯಾದ್ಯಂತ ಬಿಜೆಪಿ ಹದಿನೇಳು ತಂಡವಾಗಿ ಬರ ಸಮೀಕ್ಷೆ ಮಾಡುತ್ತಿದೆ‌ ನಾವು ಎಲ್ಲಿಗೆ ಹೋದರು ಕೂಡಾ ಡಿಸಿ, ತಹಶಿಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯು ಸಹ ಬರ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ನಿಕ್ಷ್ರಿಯವಾಗಿದೆ. ಹಾಗಾಗಿ ನಾವು ಬರ ಅಧ್ಯಯನ ಮಾಡುತ್ತಿದ್ದೇವೆ ಎಂದು ಹೇಳಿದರು.

ಹತ್ತು ಸಾವಿರ ಕೋಟಿ ಬರ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಿ ಎಂದು ರಾಜ್ಯ ಸರ್ಕಾರದ ಮುಂದೆ ಬಿಜೆಪಿ ಬೇಡಿಕೆ ಇಟ್ಟಿದೆ. ಕೇಂದ್ರದ ಜೊತೆ ನಾವು ಮಾತಾಡುವುದಾದರೆ ನೀವು ಇರುವುದು ಏನಕ್ಕೇ?. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಂದಾಯ ಮಂತ್ರಿ ಇರುವುದಾದರೂ ಏಕೆ? ಎಂದು‌ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ತೆಲಂಗಾಣಕ್ಕೆ ಪ್ರಚಾರಕ್ಕಾಗಿ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ? ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ ಎಂದು ಗುಡುಗಿದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

13 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago