ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.
ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…