ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.
ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…