ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.

ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.

ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago