ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.
ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…