ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.
ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…