ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಮಾಡಲಾಯಿತು.
ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು.
ಈ ವೇಳೆ ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ, ಗ್ರಾ.ಪಂ ಸದಸ್ಯರಾದ ಮಂಜುಳಾ, ಸುರೇಶ್, ಮಾಜಿ ಅಧ್ಯಕ್ಷ ನರಸಿಂಹ, ಎಂಪಿಸಿಎಸ್ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ರಾಮಾಂಜಿನಪ್ಪ, ಮಂಜುನಾಥ, ಮೂರ್ತಿ ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…