‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

50 minutes ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

6 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

8 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago