ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.
ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.
ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…