ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.
ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.
ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…