‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

3 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

3 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

7 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

8 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

14 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

15 hours ago