‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

5 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

7 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

8 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

12 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

13 hours ago