‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago