‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago