‘ಚೆಕ್’ ಬಳಕೆ ಮಾಡುವ ಮುನ್ನಾ ‘ಬಿ ಕೇರ್ ಫುಲ್’: ಸ್ವಲ್ಪ ಯಾಮಾರಿದ್ರೆ ಸಾಕಷ್ಟು ನಷ್ಟ: 5 ಲಕ್ಷದ ಚೆಕ್ ಕೊಟ್ಟರೆ 65 ಲಕ್ಷ ಎಂದು ತಿದ್ದಿದ ವಂಚಕ: ಭೂ ವ್ಯವಹಾರದಲ್ಲಿ ಕಮಿಷನ್ ಅತಿಯಾಸೆಗೆ ಚೆಕ್ ತಿದ್ದಿದ ಬ್ರೋಕರ್: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡುವ ವೇಳೆ ತಗಲಾಕೊಂಡ ಭೂಪ

ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.

ಮೊದಲ ಚೆಕ್ ನ್ನು ಡ್ರಾ ಮಾಡಿಕೊಂಡಿದ್ದ ಚಂದ್ರಶೇಖರ್ ಎರಡನೇ ಚೆಕ್ ಡ್ರಾ ಮಾಡಿಕೊಳ್ಳುವ ಮುನ್ನಾ ಅತಿಯಾಸೆಗೆ ಬಿದ್ದು 5 ಎಂಬ ಅಂಕಿಯ ಮುಂದೆ ಯಾವುದೇ ಅನುಮಾನ ಬಾರದಂತೆ ಅಂಕಿ ಮತ್ತು ಅಕ್ಷರಗಳಲ್ಲಿ 6 ಎಂಬ ನಂಬರನ್ನು ಬರೆದು ಬ್ಯಾಂಕ್ ನಲ್ಲಿ ಹಣವನ್ನು ಡ್ರಾ ಮಾಡಿಕೊಳ್ಳಲು ಹೋಗಿದ್ದಾನೆ.

ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.

ಇದರಿಂದ ಎಚ್ಚೆತ್ತ ಆಂಜಿನಪ್ಪ ಚೆಕ್ ತಿದ್ದಿ ನಂಬಿಕೆ ದ್ರೋಹ ಎಸಗಿದ ಚಂದ್ರಶೇಖರ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ನ್ನು ಜೈಲಿಗಟ್ಟಿದ್ದಾರೆ. ಸದ್ಯ ಜಾಮೀನು ಪಡೆದು ಹೊರ ಬಂದಿರೋ ಆರೋಪಿ.

ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago