ಭೂ ವ್ಯವಹಾರವನ್ನು ಮಾಡಿಸಿದ್ದ ಮಧ್ಯವರ್ತಿಯೊಬ್ಬ ಜಮೀನು ಖರೀದಿ ಮಾಡಿದ್ದವರಿಂದ ಕಮಿಷನ್ ಹಣಕ್ಕಾಗಿ ಚೆಕ್ ಪಡೆದುಕೊಂಡು ಆ ಚೆಕ್ ಅನ್ನು ತಿದ್ದಿ, ಹಣವನ್ನು ಬ್ಯಾಂಕ್ ನಲ್ಲಿ ಡ್ರಾ ಮಾಡಿಕೊಳ್ಳಲು ಹೋಗಿದ್ದಾಗ ಚೆಕ್ ನ ಅಸಲಿ ಸತ್ಯ ಬಯಲಾಗಿ ಖದೀಮ ಜೈಲುಪಾಲಾಗಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿಯ ದರ್ಗಾಪುರ ಸರ್ವೆ ನಂಬರ್ 32/6 ಮತ್ತು 32/4 ರಲ್ಲಿ ಒಟ್ಟು ಎರಡು ಎಕರೆಯನ್ನು ಜಮೀನು ಮಾಲೀಕರಿಂದ ಆಂಜಿನಪ್ಪ ಎಂಬುವರು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ವ್ಯವಹಾರನ್ನು ಎಂ.ಸಿ ಚಂದ್ರಶೇಖರ್ ಎಂಬಾತನ ಮುಂದಾಳತ್ವದಲ್ಲಿ ನಡೆದಿತ್ತು. ಸದರಿ ಕೆಲಸಕ್ಕೆ ಮಧ್ಯವರ್ತಿಯ ಏಜೆಂಟ್ ಕಮಿಷನ್ ಆಗಿ 10 ಲಕ್ಷ ರೂ. ಮಾತನಾಡಿದ್ದರು. ಇದಕ್ಕಾಗಿ ಜಮೀನು ಖರೀದಿ ಮಾಡಿದ್ದ ಆಂಜಿನಪ್ಪ, ಚಂದ್ರಶೇಖರ್ ಅವರಿಗೆ ತಲಾ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದರು.
ಚೆಕ್ ನೋಡಿದ ಬ್ಯಾಂಕ್ ಸಿಬ್ಬಂದಿ ಅನುಮಾನಗೊಂಡು ಚೆಕ್ ಖಾತೆಯ ಗ್ರಾಹಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಬಳಿಕ ಚೆಕ್ ಮಾಲೀಕನು ನಾನು ಕೇವಲ 5 ಲಕ್ಷ ರೂಪಾಯಿಯ ಚೆಕ್ ಕೊಟ್ಟಿದ್ದೇನೆ. 65 ಲಕ್ಷ ರೂ. ಚೆಕ್ ಕೊಟ್ಟಿಲ್ಲ ಎಂದು ಹೇಳಿದಾಗ ಮಧ್ಯವರ್ತಿ ಚಂದ್ರಶೇಖರ್ ಅಸಲಿ ಸತ್ಯ ಹೊರ ಬಂದಿದೆ.
ಜಮೀನು ವ್ಯವಹಾರ ಮಾಡಿಸಿಕೊಟ್ಟ ವಿಶ್ವಾಸಕ್ಕೆ 5 ಲಕ್ಷ ರೂ.ಗಳ ಎರಡು ಚೆಕ್ ಗಳನ್ನು ನೀಡಿದ್ದೇವು, ಅತಿಯಾಸೆಗೆ ಬಿದ್ದ ಮಧ್ಯವರ್ತಿ ಚಂದ್ರಶೇಖರ್ ಚೆಕ್ ತಿದ್ದಿ ಡ್ರಾ ಮಾಡಿಕೊಳ್ಳಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ನಂಬಿಕೆ, ವಿಶ್ವಾಸ ದ್ರೋಹಿಗಳಿಗೆ ಕಾನೂನು ರೀತಿಯಾಗಿ ಶಿಕ್ಷೆಯಾಗಬೇಕು ಎಂದು ಚೆಕ್ ಮಾಲೀಕ ಆಂಜಿನಪ್ಪ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…