ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…