ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…