Categories: ಕೊಡಗು

ಚೆಟ್ಟಳ್ಳಿಯಲ್ಲಿ ಮರಬಿದ್ದು ಕಾರ್ಮಿಕ ದುರ್ಮಣ

ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ  ನಡೆದಿದೆ.

ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ‌ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.

ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತ‌ಪಟ್ಟಿರುತ್ತಾನೆ.

ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

2 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

3 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

15 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago