ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…