ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…