ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…