ಮರ ಕಪಾತು ಮಾಡುತ್ತಿದ್ದ ಸಂದರ್ಭ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಮೇಜರ್ ಕೊಂಗೇಟಿರ ಮೊಣ್ಣಪ್ಪರವರ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ದುರಂತ ಸಂಭವಿಸಿದ್ದು, ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಮಿಕ ಮಣಿ(25) ಎಂಬಾತ ದಾರುಣವಾಗಿ ಅಂತ್ಯ ಕಂಡವರಾಗಿದ್ದಾರೆ.
ಇವರು ತೋಟದಲ್ಲಿ ಮರಕಪಾತು ಕೆಲಸ ಮಾಡಿಸುತ್ತಿದ್ದ ಸಂದರ್ಭ ಮಳೆ ಬರುತಿದ್ದ ಕಾರಣಕ್ಕೆ ಕಾರ್ಮಿಕನೋರ್ವನನ್ನು ಏಣಿಯಿಂದ ಇಳಿಸಲು ಕಾರ್ಮಿಕ ಮಣಿ ತೆರಳಿದ ಸಂದರ್ಭ ಮಳೆಗಾಳಿಯ ರಭಸಕ್ಕೆ ಪಕ್ಕದಲ್ಲಿ ಸುಮಾರು 60 ಅಡಿ ಎತ್ತದ ಬಳಂಜಿ ಬರವು ಕಾರ್ಮಿಕ ಮಣಿ ಎಂಬಾತ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮ್ರತಪಟ್ಟಿರುತ್ತಾನೆ.
ಮಾಹಿತಿ ತಿಳಿದ ತಕ್ಷಣ ಚೆಟ್ಟಳ್ಳಿ ಉಪಠಾಣಾಧಿಕಾರಿ ಎಎಸ್ ಐ ದಿನೇಶ್ ಎಂ.ಎನ್ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿದ್ದರು. ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ್ ನಿರೀಕ್ಷರಾದ ಚಂದ್ರ ಶೇಖರ್ ಹಾಗು ಪಿಎಸ್ ಐ ಶ್ರೀನಿವಾಸಲು ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…