Categories: ಕೋಲಾರ

ಚೆನ್ನೈ ಕಾರಿಡಾರ್ ನಿಂದ ಕೆರೆ ಸ್ವರೂಪ ಹಾಳು, ರೈತರ ಬೆಳೆಗಳಿಗೆ ಹಾನಿ‌: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿ ಕೆರೆಯ ಸ್ವರೂಪವನ್ನೇ ಹಾಳು ಮಾಡಿರುವ ಚೆನ್ನೈ ಕಾರಿಡಾರ್ ರಸ್ತೆಯ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡು ದೂಳಿನಿಂದ ರಸ್ತೆಯ ಅಕ್ಕಪಕ್ಕದಲ್ಲಿ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ಪರಿಹಾರ ನೀಡುವಂತೆ ರೈತ ಸಂಘದಿಂದ ಸಣ್ಣ ನಿರಾವರಿ ಇಲಾಖೆ ಅಧಿಕಾರಿ ಹರಿಕೃಷ್ಣ ಅವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಚೆನ್ನೈ ಕಾರಿಡಾರ್ ರಸ್ತೆ ಕಾಮಗಾರಿ ಮುಗಿಯುವ ಹಂತ ತಲುಪಿದ್ದು ಗುತ್ತಿಗೆದಾರರ ನಿರ್ಲಕ್ಷದಿಂದ ಹಾಳಾಗಿರುವ ಕೆರೆಗಳನ್ನು ಪರಿಶೀಲನೆ ಮಾಡಬೇಕಾದ ಗಣಿ ಇಲಾಖೆ ಅಧಿಕಾರಿಗಳು ಕಛೇರಿಯಲ್ಲಿಯೇ ಕುಳಿತು ಪರಿಶೀಲನಾ ವರದಿಯ ಕಡತ ಸೃಷ್ಠಿ ಮಾಡಿ ಎನ್.ಒ.ಸಿ ನೀಡಿರುವುದು ದುರಾದೃಷ್ಠಕರ ವಿಚಾರ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಕೃಷಿ ಭೂಮಿಗೆ ಹಾಗೂ ಇಟ್ಟಿಗೆ ಕಾರ್ಖಾನೆಗೆ ಮಣ್ಣು ಬೇಕಾದರೆ ನೂರೊಂದು ಕಾನೂನು ಹೇಳುವ ಗಣಿ ಹಾಗೂ ಸಣ್ಣ ನೀರಾವರಿ ಅಧಿಕಾರಿಗಳಿಗೆ ಚೆನ್ನೈ ಕಾರಿಡಾರ್ ಗುತ್ತಿಗೆದಾರರ ಕೆರೆ ಹಾಳು ಮಾಡುತ್ತಿರುವುದು ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲವೆ ಎಂದು ಪ್ರಶ್ನೆ ಮಾಡುವ ಜೊತೆಗೆ ರೈತರಿಗೆ ಒಂದು ನ್ಯಾಯ ರಾಜಕೀಯ ಬೆಂಬಲ ಇರುವವರಿಗೆ ಒಂದು ನ್ಯಾಯವೇ ಎಂದು ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.

ರಸ್ತೆ, ಕೈಗಾರಿಕೆ ಅಭಿವೃದ್ದಿ ಹೆಸರಿನಲ್ಲಿ ರೈತರ ಕೃಷಿ ಜಮೀನನ್ನು ಬಲವಂತದಿಂದ ಕಾನೂನಿನ ಭಯ ಹುಟ್ಟಿಸಿ. ವಶಪಡಿಸಿಕೊಂಡು ಪರಿಹಾರ ನೀಡದೇ ಕಛೇರಿಗೆ ಅಲೆದಾಡಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಜಲ ಮೂಲಗಳ ಜೀವನಾಡಿಯಾದ ಕೆರೆಗಳನ್ನು ಚೆನ್ನೈ ಕಾರಿಡಾರ್ ಹೈವೆ ಅಭಿವೃದ್ದಿ ಗುತ್ತಿಗೆದಾರರು ಸಂಪೂರ್ಣವಾಗಿ ತಮಗೆ ಇಷ್ಟಬಂದ ರೀತಿ ಮಣ್ಣು ತೆಗೆಯುವ ಮೂಲಕ ಕೆರೆಗಳನ್ನು ಹಾಳು ಮಾಡುತ್ತಿದ್ದರು ಅದನ್ನು ತಡೆಯಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆಂದು ಕಿಡಿಕಾರಿದರು.

ರಸ್ತೆ ಅಭಿವೃದ್ದಿ ಮಾಡುತ್ತಿರುವುದಕ್ಕೆ ನಮ್ಮ ಅಭ್ಯಂತರವು ಇಲ್ಲ ಆದರೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಣ್ಣ ನೀರಾವರಿ ಇಲಾಖೆ, ಅಧಿಕಾರಿಗಳು ಕೆರೆಯಲ್ಲಿ ಮಣ್ಣು ತೆಗೆಯಲು ಚೆನ್ನೈ ಕಾರಿಡಾರ್ ರಸ್ತೆ ಗುತ್ತಿಗೆದಾರರಿಗೆ ನೀಡಿರುವುದು 3 ರಿಂದ 4 ಅಡಿ ಜೊತೆಗೆ ಯಾವುದೇ ರೀತಿಯ ಕೆರೆಗೆ ಹಾನಿಯಾಗದ ಜೊತೆಗೆ ಮಳೆ ನೀರು ಸಂಗ್ರಹವಾದಾಗ ಪ್ರಾಣಿಗಳಿಗೆ ತೊಂದರೆಯಾಗಬೇಕೆಂದು ನಿರ್ಬಂಧನೆಗಳನ್ನು ನೀಡಿ ಆದೇಶ ನೀಡಿದರೆ ಗುತ್ತಿಗೆದಾರರು ಆದೇಶಗಳನ್ನು ಗಾಳಿಗೆ ತೂರಿ ತಮಗೆ ಇಷ್ಟ ಬಂದ ಹಾಗೆ 10 ರಿಂದ 30 ಅಡಿಯವರೆಗೂ ಆಳ ಮಾಡುವ ಮೂಲಕ ಕೆರೆಯ ಸ್ವರೂಪಗಳನ್ನು ಹಾಳು ಮಾಡುತ್ತಿದ್ದಾರೆಂದು ಗುತ್ತಿಗೆದಾರರ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ ದುಬಾರಿ ಆಗಿರುವ ಕೃಷಿ ಕ್ಷೇತ್ರದ ಮೇಲೆ ಖಾಸಗಿ ಸಾಲ ಮಾಡಿ ಲಕ್ಷಾಂತರ ಬಂಡವಾಳ ಹಾಕಿ ರೋಗಗಳಿಂದ ಬೆಳೆ ರಕ್ಷಣೆ ಮಾಡಿಕೊಂಡರೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದ್ದರೂ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿ ಸಂಕಷ್ಟಕ್ಕಿದ್ದ ರೈತರಿಗೆ ಮತ್ತೆ ಚೆನೈ ಕಾರಿಡಾರ್ ರಸ್ತೆ ಅಭಿವೃದ್ದಿ ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಅಕ್ಕ ಪಕ್ಕದ ರೇಷ್ಮೆ ಟೆಮೊಟೋ ಕ್ಯಾಪ್ಸಿಕಂ ಹೂ ಬೆಳೆಗಳು ದೂಳಿಗೆ ಸಂಪೂರ್ಣ ನಾಶವಾಗುತ್ತಿದ್ದರೂ ಗುತ್ತಿಗೆದಾರರು ಕನಿಷ್ಠ ಪಕ್ಷದ ಸೌರ್ಜನ್ಯಕಾದರು ರಸ್ತೆಯಲ್ಲಿ ನೀರನ್ನು ಸಿಂಪರಣೆ ಮಾಡುತ್ತಿಲ್ಲ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಮಾನ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಗುತ್ತಿಗೆದಾರರಿಂದ ನಷ್ಟವಾಗಿರುವ ಪ್ರತಿ ಎಕೆರೆಗೆ ೫ ಲಕ್ಷ ಪರಿಹಾರ ಕೊಡಿಸಬೇಕೆಂದು ಒತ್ತಾಯ ಮಾಡಿದರು.

ಕೆರೆ ಸ್ವರೂಪವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡು ಕೆರೆಗಳನ್ನು ಅಭಿವೃದ್ದಿಪಡಿಸಿ ಮಳೆಗಾಲದಲ್ಲಿ ಜಾನುವಾರಗಳನ್ನು ಮತ್ತು ಅಮಾಯಕ ರೈತ ಕೂಲಿಕಾರ್ಮಿಕ ಜೀವವನ್ನು ಉಳಿಸಬೇಕೆಂದು ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಹರಿಕೃಷ್ಣ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಂಬಂದಫಟ್ಟ ಗುತ್ತಿಗೆದಾರರು ಹಾಗೂ ಎನ್.ಹೆಚ್.ಎ.ಐ ಅಧಿಕಾರಿಗಳು ಸಭೆ ಕರೆದು ಕೆರೆಯ ಸ್ವರೂಪವನ್ನು ಹಾಳು ಮಾಡಿರುವ ಹಾಗೂ ರೈತರ ಬೆಳೆ ನಷ್ಟವಾಗಿರುವ ಸ್ಥಳವನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಂಡು ರೈತರಿಗೆ ಕೆರೆಗಳಿಗೆ ಹಾನಿಯಾಗದ ರೀತಿ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ಶಿವಾರೆಡ್ಡಿ, ಯಲ್ಲಪ್ಪ, ಕೆ.ಇ.ಬಿ ಚಂದ್ರು, ಗೀರೀಶ್, ಸುಪ್ರೀಂ ಚಲ, ಶೈಲಜ, ರತ್ನಮ್ಮ ಚೌಡಮ್ಮ, ಶೋಭ, ಮಹಾಲಕ್ಷ್ಮಿ, ಮುಂತಾದವರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

3 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago