Categories: ಕೋಲಾರ

ಚೆನ್ನೈ ಕಾರಿಡಾರ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗಡಿಭಾಗದ ಚುಕ್ಕನಹಳ್ಳಿ ಸರ್ವೇ ನಂಬರ್ 35 ರಲ್ಲಿನ 10 ಜನ ರೈತರಿಗೆ ಎರಡನೇ ಹಂತದ ಮರಗಿಡಗಳಿಗೆ ಪರಿಹಾರ ಹಣವನ್ನು ಚಿತ್ತೂರು ಪಿಡಿ ಖಾತೆಯಿಂದ ಬಿಡುಗಡೆ ಮಾಡಿಸಿ ರೈತರಿಗೆ ವಿತರಣೆ ಮಾಡಬೇಕೆಂದು ರೈತಸಂಘದಿಂದ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ ಮುಂದೆ ಖಾಲಿ ಮಡಿಕೆಗಳ ಸಮೇತ ಪ್ರತಿಭಟನೆ ಮಾಡಿ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

ಪೂರ್ವಜರ ಕಾಲದಿಂದ ಕೃಷಿಭೂಮಿಯನ್ನು ನಂಬಿಕೊಂಡು ಗಂಜಿ ಕುಡಿಯುತ್ತಿದ್ದ ಕುಟುಂಬದ ಗಂಜಿ ಪಾತ್ರೆಯನ್ನು ಕಸಿದು ಪರಿಹಾರ ನೀಡದೇ ನಮ್ಮ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಅಧಿಕಾರಿಗಳಿಗೆ ಬಡವರ ಶಾಪ ತಟ್ಟುತ್ತದೆ ಎಂದು ನೊಂದ ರೈತರಾದ ರಾಜಣ್ಣ ಮತ್ತು ನಟರಾಜ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೊಳತೂರು ಮಾಲೂರು ವ್ಯಾಪ್ತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ 500 ಕೋಟಿ
ಪರಿಹಾರ ಅಕ್ರಮ ನಡೆಸಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳೇ ಗಡಿಭಾಗದ ನೊಂದ ರೈತರ 1 ಕೋಟಿ 17 ಲಕ್ಷ ಪರಿಹಾರಕ್ಕೆ ನಿಮ್ಮ ಕೈಕಾಲು ಹಿಡಿಯಬೇಕೇ. ಬಡವರ ಅನ್ನಕ್ಕೆ ಕನ್ನ ಹಾಕಿ ನಮ್ಮ ಹಣವನ್ನು ಲಪಟಾಯಿಸಲು ನಾಚಿಕೆಯಾಗುವುದಿಲ್ಲವೇ ಎಂದು ಹಿಡಿಶಾಪ ಹಾಕಿದರು.

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ
ಚುಕ್ಕನಹಳ್ಳಿ ಸರ್ವೇ ನಂಬರ್ 35ರಲ್ಲಿನ 10 ಜನ ರೈತರ 2ನೇ ಮರಗಿಡಗಳ ಪರಿಹಾರದ ಹಣ
ಚಿತ್ತೂರಿನ ಪಿಡಿ ಖಾತೆಯಲ್ಲಿ 1.17.65,928 ರೂಗಳು ಇದ್ದು, ಅದನ್ನು ಬಿಡುಗಡೆ ಮಾಡಿಸಿ ರೈತರಿಗೆ ವಿತರಣೆ ಮಾಡಬೇಕಾದ ಜವಾಬ್ದಾರಿ ಸರಕಾರ ಲಕ್ಷಾಂತರ ರೂಪಾಯಿ ಸಂಬಳಕೊಟ್ಟು ನೇಮಕ ಮಾಡಿರುವ ಅಧಿಕಾರಿ ಜವಾಬ್ದಾರಿಯಲ್ಲವೇ ಎಂದು ಪ್ರಶ್ನೆ ಮಾಡಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಹಣ ಬಿಡುಗಡೆ ಮಾಡಲು ಮಾತ್ರ ನಾವು, ಬೇರೆಯವರ ಖಾತೆಯಲ್ಲಿರುವ ಹಣವನ್ನು ರೈತರೇ ಹೋರಾಟ ಮಾಡಿ ಬಿಡುಗಡೆ ಮಾಡಿಸಿದರೆ ನಾವು ವಿತರಣೆ ಮಾಡುತ್ತೇವೆಂಬ ರೈತ ವಿರೋಧಿ ಧೋರಣೆ ನ್ಯಾಯವೇ ಭೂಮಿ ಕಳೆದುಕೊಂಡ ನೋವಿನಲ್ಲಿರುವ ರೈತರು ಪರಿಹಾರಕ್ಕೂ ಜಾತಕ ಪಕ್ಷಿಗಳಂತೆ ರಸ್ತೆಗಿಳಿದು ಹೋರಾಟ ಮಾಡಬೇಕೇ ಇದು ನಿಮಗೆ ಸರಿಯೇ. ರೈತರ ಮೇಲೆ ಕಾಳಜಿ ಇದ್ದರೆ
ಕೂಡಲೇ ಕಾನೂನಿನ ಸಲಹೆಗಾರರ ಪ್ರಕಾರ ಹಣ ಬಿಡುಗಡೆ ಮಾಡಬಹುದಲ್ಲವೇ ಎಂದು ಪ್ರಶ್ನೆ ಮಾಡಿದರು.

ಚಿತ್ತೂರು ಪಿಡಿ ಪರವಾಗಿ ಬರುವಂತಹ ಕಾರ್ತಿಕ್ ರೆಡ್ಡಿ ಅವರು ಗಡಿಭಾಗದ ರೈತರು ಅಧಿಕಾರಿಗಳಿಗೆ ಲಂಚವನ್ನು ನೀಡಿ ಹೆಚ್ಚಿನ ಮರಗಿಡಗಳ ಲೆಕ್ಕ ಬರೆಯಿಸಿಕೊಂಡು ಹೆಚ್ಚಿನ
ಪರಿಹಾರವನ್ನು ಪಡೆಯುತ್ತಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಆದರೆ, ನಿಮ್ಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ತೋಟಗಾರಿಕೆ, ರೇಷ್ಮೆ, ಅರಣ್ಯ ಅಧಿಕಾರಿಗಳು ನೀಡಿರುವ ವರದಿ ತಪ್ಪೇ ನಿಮ್ಮ ಪ್ರಕಾರ ವರದಿ ಎಲ್ಲಿ. ಸತ್ಯಾಂಶ ಇದೆ ಎಂಬುದಾದರೆ ಚಿತ್ತೂರು ಪಿಡಿ
ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ ನಮ್ಮ ಹಣವನ್ನು ಬಿಡುಗಡೆ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್‍ಡಿಎ ಅಧಿಕಾರಿ ಮಯೂರಿ ಮಲ್ಲಿ, ನಿಮ್ಮ ಸಮಸ್ಯೆಯನ್ನು
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಬಗೆಹರಿಸುವ ಭರವಸೆಯನ್ನು ನೀಡಿದರು.

ಹೋರಾಟದಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಂಗವಾದಿ ನಾಗರಾಜಗೌಡ, ಮರಗಲ್ ಶ್ರೀನಿವಾಸ್, ಮೂರಂಡಹಳ್ಳಿ ಶಿವಾರೆಡ್ಡಿ, ಸುಪ್ರೀಂಚಲ, ಶಶಿಕುಮಾರ್, ಮುನಿರಾಜು, ಕುಮಾರ್, ನಾರಾಯಣಸ್ವಾಮಿ, ಮಾರಪ್ಪ, ಮೀಸೆ ವೆಂಕಟೇಶಪ್ಪ, ಜನಾರ್ಧನ್, ಬಾಬು, ಮಂಗಮ್ಮ,
ಫಾರೂಖ್ ಪಾಷ, ಭಾಸ್ಕರ್, ರಾಜೇಶ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಯಲ್ಲಣ್ಣ, ಶೈಲಜ, ರತ್ನಮ್ಮ, ಮುನಿರತ್ನಮ್ಮ, ಗೌರಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago