Categories: ಕೋಲಾರ

ಚೆನ್ನೈ ಕಾರಿಡಾರ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗಡಿಭಾಗದ ಚುಕ್ಕನಹಳ್ಳಿ ಸರ್ವೇ ನಂಬರ್ 35 ರಲ್ಲಿನ 10 ಜನ ರೈತರಿಗೆ ಎರಡನೇ ಹಂತದ ಮರಗಿಡಗಳಿಗೆ ಪರಿಹಾರ ಹಣವನ್ನು ಚಿತ್ತೂರು ಪಿಡಿ ಖಾತೆಯಿಂದ ಬಿಡುಗಡೆ ಮಾಡಿಸಿ ರೈತರಿಗೆ ವಿತರಣೆ ಮಾಡಬೇಕೆಂದು ರೈತಸಂಘದಿಂದ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ ಮುಂದೆ ಖಾಲಿ ಮಡಿಕೆಗಳ ಸಮೇತ ಪ್ರತಿಭಟನೆ ಮಾಡಿ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

ಪೂರ್ವಜರ ಕಾಲದಿಂದ ಕೃಷಿಭೂಮಿಯನ್ನು ನಂಬಿಕೊಂಡು ಗಂಜಿ ಕುಡಿಯುತ್ತಿದ್ದ ಕುಟುಂಬದ ಗಂಜಿ ಪಾತ್ರೆಯನ್ನು ಕಸಿದು ಪರಿಹಾರ ನೀಡದೇ ನಮ್ಮ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಅಧಿಕಾರಿಗಳಿಗೆ ಬಡವರ ಶಾಪ ತಟ್ಟುತ್ತದೆ ಎಂದು ನೊಂದ ರೈತರಾದ ರಾಜಣ್ಣ ಮತ್ತು ನಟರಾಜ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೊಳತೂರು ಮಾಲೂರು ವ್ಯಾಪ್ತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ 500 ಕೋಟಿ
ಪರಿಹಾರ ಅಕ್ರಮ ನಡೆಸಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳೇ ಗಡಿಭಾಗದ ನೊಂದ ರೈತರ 1 ಕೋಟಿ 17 ಲಕ್ಷ ಪರಿಹಾರಕ್ಕೆ ನಿಮ್ಮ ಕೈಕಾಲು ಹಿಡಿಯಬೇಕೇ. ಬಡವರ ಅನ್ನಕ್ಕೆ ಕನ್ನ ಹಾಕಿ ನಮ್ಮ ಹಣವನ್ನು ಲಪಟಾಯಿಸಲು ನಾಚಿಕೆಯಾಗುವುದಿಲ್ಲವೇ ಎಂದು ಹಿಡಿಶಾಪ ಹಾಕಿದರು.

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ
ಚುಕ್ಕನಹಳ್ಳಿ ಸರ್ವೇ ನಂಬರ್ 35ರಲ್ಲಿನ 10 ಜನ ರೈತರ 2ನೇ ಮರಗಿಡಗಳ ಪರಿಹಾರದ ಹಣ
ಚಿತ್ತೂರಿನ ಪಿಡಿ ಖಾತೆಯಲ್ಲಿ 1.17.65,928 ರೂಗಳು ಇದ್ದು, ಅದನ್ನು ಬಿಡುಗಡೆ ಮಾಡಿಸಿ ರೈತರಿಗೆ ವಿತರಣೆ ಮಾಡಬೇಕಾದ ಜವಾಬ್ದಾರಿ ಸರಕಾರ ಲಕ್ಷಾಂತರ ರೂಪಾಯಿ ಸಂಬಳಕೊಟ್ಟು ನೇಮಕ ಮಾಡಿರುವ ಅಧಿಕಾರಿ ಜವಾಬ್ದಾರಿಯಲ್ಲವೇ ಎಂದು ಪ್ರಶ್ನೆ ಮಾಡಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಹಣ ಬಿಡುಗಡೆ ಮಾಡಲು ಮಾತ್ರ ನಾವು, ಬೇರೆಯವರ ಖಾತೆಯಲ್ಲಿರುವ ಹಣವನ್ನು ರೈತರೇ ಹೋರಾಟ ಮಾಡಿ ಬಿಡುಗಡೆ ಮಾಡಿಸಿದರೆ ನಾವು ವಿತರಣೆ ಮಾಡುತ್ತೇವೆಂಬ ರೈತ ವಿರೋಧಿ ಧೋರಣೆ ನ್ಯಾಯವೇ ಭೂಮಿ ಕಳೆದುಕೊಂಡ ನೋವಿನಲ್ಲಿರುವ ರೈತರು ಪರಿಹಾರಕ್ಕೂ ಜಾತಕ ಪಕ್ಷಿಗಳಂತೆ ರಸ್ತೆಗಿಳಿದು ಹೋರಾಟ ಮಾಡಬೇಕೇ ಇದು ನಿಮಗೆ ಸರಿಯೇ. ರೈತರ ಮೇಲೆ ಕಾಳಜಿ ಇದ್ದರೆ
ಕೂಡಲೇ ಕಾನೂನಿನ ಸಲಹೆಗಾರರ ಪ್ರಕಾರ ಹಣ ಬಿಡುಗಡೆ ಮಾಡಬಹುದಲ್ಲವೇ ಎಂದು ಪ್ರಶ್ನೆ ಮಾಡಿದರು.

ಚಿತ್ತೂರು ಪಿಡಿ ಪರವಾಗಿ ಬರುವಂತಹ ಕಾರ್ತಿಕ್ ರೆಡ್ಡಿ ಅವರು ಗಡಿಭಾಗದ ರೈತರು ಅಧಿಕಾರಿಗಳಿಗೆ ಲಂಚವನ್ನು ನೀಡಿ ಹೆಚ್ಚಿನ ಮರಗಿಡಗಳ ಲೆಕ್ಕ ಬರೆಯಿಸಿಕೊಂಡು ಹೆಚ್ಚಿನ
ಪರಿಹಾರವನ್ನು ಪಡೆಯುತ್ತಿದ್ದಾರೆಂದು ಆರೋಪ ಮಾಡುತ್ತಿದ್ದಾರೆ. ಆದರೆ, ನಿಮ್ಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ತೋಟಗಾರಿಕೆ, ರೇಷ್ಮೆ, ಅರಣ್ಯ ಅಧಿಕಾರಿಗಳು ನೀಡಿರುವ ವರದಿ ತಪ್ಪೇ ನಿಮ್ಮ ಪ್ರಕಾರ ವರದಿ ಎಲ್ಲಿ. ಸತ್ಯಾಂಶ ಇದೆ ಎಂಬುದಾದರೆ ಚಿತ್ತೂರು ಪಿಡಿ
ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ ನಮ್ಮ ಹಣವನ್ನು ಬಿಡುಗಡೆ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್‍ಡಿಎ ಅಧಿಕಾರಿ ಮಯೂರಿ ಮಲ್ಲಿ, ನಿಮ್ಮ ಸಮಸ್ಯೆಯನ್ನು
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಬಗೆಹರಿಸುವ ಭರವಸೆಯನ್ನು ನೀಡಿದರು.

ಹೋರಾಟದಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಬಂಗವಾದಿ ನಾಗರಾಜಗೌಡ, ಮರಗಲ್ ಶ್ರೀನಿವಾಸ್, ಮೂರಂಡಹಳ್ಳಿ ಶಿವಾರೆಡ್ಡಿ, ಸುಪ್ರೀಂಚಲ, ಶಶಿಕುಮಾರ್, ಮುನಿರಾಜು, ಕುಮಾರ್, ನಾರಾಯಣಸ್ವಾಮಿ, ಮಾರಪ್ಪ, ಮೀಸೆ ವೆಂಕಟೇಶಪ್ಪ, ಜನಾರ್ಧನ್, ಬಾಬು, ಮಂಗಮ್ಮ,
ಫಾರೂಖ್ ಪಾಷ, ಭಾಸ್ಕರ್, ರಾಜೇಶ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಯಲ್ಲಣ್ಣ, ಶೈಲಜ, ರತ್ನಮ್ಮ, ಮುನಿರತ್ನಮ್ಮ, ಗೌರಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

16 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago