Categories: ಕೋಲಾರ

ಚೆನ್ನೈ ಕಾರಿಡಾರ್ ರಸ್ತೆಯ ಗುತ್ತಿಗೆದಾರನ ನಿರ್ಲಕ್ಷ್ಯ: ರೈತರ ಜಮೀನುಗಳಿಗೆ ತೊಂದರೆ ಖಂಡಿಸಿ ಜ.23ಕ್ಕೆ ಹೆದ್ದಾರಿ ಬಂದ್

ಕೋಲಾರ: ಚೆನ್ನೈ ಕಾರಿಡಾರ್ ಗುತ್ತಿಗೆದಾರರ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಾಳಾಗಿರುವ ಕೆರೆಗಳನ್ನು ವೀಕ್ಷಣೆ ಮಾಡಲು ವಿಶೇಷ ತಂಡ ರಚನೆ ಮಾಡಿ ರೈತರ ಜಮೀನುಗಳಿಗೆ ರಸ್ತೆ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜ.23ರ ಗುರುವಾರ ತಲೆಯ ಮೇಲೆ ಕಲ್ಲು ಇಟ್ಟುಕೊಂಡು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕಳೆದು ಹೊಗಿರುವ ಅಧಿಕಾರಿಗಳನ್ನು ಹುಡುಕಿ ಕೊಡುವಂತೆ ಬಂಗಾರಪೇಟೆ-ಕೋಲಾರ ರಾಜ್ಯ.ಹೆದ್ದಾರಿ ಮುಖ್ಯರಸ್ತೆ ಬೀರಂಡಹಳ್ಳಿ ಗೇಟ್ ಬಂದ್ ಮಾಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಹಂಚಾಳ ಗೇಟ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಜಮೀನನ್ನು
ಬಲವಂತದಿಂದ ಕಾನೂನಿನ ಭಯ ಹುಟ್ಟಿಸಿ ಭೂ ಸ್ವಾಧೀನ ಮಾಡಿಕೊಂಡಿರುವ ಅಧಿಕಾರಿಗಳು, ಉಳಿದಿರುವ ಅಲ್ಪಸ್ವಲ್ಪ ಭೂಮಿಗೆ ದಾರಿ ಕಲ್ಪಿಸದೆ ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಜೊತೆಗೆ ರೈತರು ಉಳಿಕೆ ಜಮೀನಿಗೆ ಬರಲು ಕನಿಷ್ಟ 10 ಕಿ.ಮೀ ಸುತ್ತಾಡಿ ಬರುವಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆಂದು ಅಧಿಕಾರಿಗಳ ವಿರುದ್ಧ
ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ಮಾಡಿಕೊಳ್ಳುವಾಗ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸುವ ಜೊತೆಗೆ
ರೈತರ ಜೊತೆ ನಾವು ಇದ್ದೇವೆ ಎಂದು ಮಾತು ಕೊಟ್ಟಂತಹ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಭೂಸ್ವಾಧೀನವಾಗಿ ರಸ್ತೆಯೂ ಶೇ.90 ರಷ್ಟು ಕಾಮಗಾರಿ ಮುಗಿದಿದ್ದು,
ರೈತರು ನಮಗೆ ನಮ್ಮ ಹೊಲ ತೋಟಗಳಿಗೆ ಹೋಗಲು ರಸ್ತೆ ಕೊಡಿ ಎಂದರೆ ಹೋಗಿ ರಾಷ್ಟ್ರಪತಿಯನ್ನು ಕೇಳಿಕೊಳ್ಳಿ ಎಂದು ಉತ್ತರ ನೀಡುತ್ತಿರುವುದರಿಂದ ನೊಂದ ರೈತರು
ನ್ಯಾಯ ಸಿಗದೆ ಕಣ್ಣೀರು ಸುರಿಸುವ ಪರಿಸ್ಥಿತಿ ಇದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಒಂದು ಕಡೆ ರಸ್ತೆಯೂ ಇಲ್ಲ. ಮತ್ತೊಂದು ಕಡೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನಷ್ಟವಾಗಿರುವ ಬೆಳೆ ಪರಿಹಾರವೂ ಇಲ್ಲ. ಮತ್ತೊಂದು ಕಡೆ ಪಿ ನಂಬರ್ ಹೆಸರಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರವೂ ಕೊಡದೆ ರೈತರ ಹೆಸರಿನಲ್ಲಿ ಡಿಬಿಎಲ್
ಗುತ್ತಿಗೆದಾರರಾದ ಸಾಂಭಶಿವ ರಾವ್ ಮತ್ತಿತರರು ಕೋಟಿಕೋಟಿ ಹಣವನ್ನು ನಕಲಿ ದಾಖಲೆಗಳು
ಸೃಷ್ಟಿ ಮಾಡಿಕೊಂಡು ಲೂಟಿ ಮಾಡುತ್ತಿದ್ದಾರೆಂದು ಆರೋಪಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಚೆನ್ನೈ ಕಾರಿಡಾರ್ ಗುತ್ತಿಗೆದಾರರು ಜಿಲ್ಲಾಡಳಿತ ನಿಯಮಗಳನ್ನು ಮೀರಿ ಹತ್ತಾರು ಕೆರೆಗಳಲ್ಲಿ 20 ರಿಂದ 30 ಅಡಿ ಮಣ್ಣನ್ನು ತೆಗೆದು ಬೃಹದಾಕಾರದ ಕಂದಕಗಳನ್ನು ಸೃಷ್ಟಿ ಮಾಡಿ ಕೆರೆ ಸ್ವರೂಪವನ್ನು ಹಾಳು ಮಾಡುವ ಜೊತೆಗೆ ಜಾನುವಾರುಗಳಿಗೆ ಮತ್ತು ರೈತರಿಗೆ
ಯಮಲೋಕ ತೋರಿಸುವಂತೆ ಕೆರೆಗಳನ್ನು ಹಾಳು ಮಾಡಿದ್ದರೂ ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು
ಕೆರೆ ಪರಿಶೀಲನೆ ಮಾಡದೆ ಎನ್.ಒ.ಸಿ. ನೀಡಿರುವುದು ದುರಾದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆದಾರರಿಗೆ ಕರೆ ಮಾಡಿದರೆ ಉತ್ತರವಿಲ್ಲ. ಅಧಿಕಾರಿಗಳಿಗೆ ದೂರು ನೀಡಿದರೆ ನೆಪ ಮಾತ್ರಕ್ಕೆ ಕ್ರಮಕೈಗೊಳ್ಳುತ್ತೇವೆಂದು ಗುತ್ತಿಗೆದಾರರ ಜೊತೆ ಶಾಮೀಲಾಗಿ ಲಕ್ಷಲಕ್ಷ ಲಂಚ ಪಡೆದು ಪೂರ್ವಜರು ಕಟ್ಟಿ ಬೆಳೆಸಿದ ಕೆರೆಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆಂದು
ಅವ್ಯವಸ್ಥೆ ವಿರುದ್ಧ ಕಿಡಿಕಾರಿದರು.

ನಮ್ಮ ಕೆರೆ ಉಳಿವಿಗಾಗಿ ನಮ್ಮ ತೋಟದ ರಸ್ತೆಗಾಗಿ ಹಾಗೂ ರೈತರ ಪರಿಹಾರವನ್ನು ವಿತರಣೆ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಮ್ಮ ಮೂಲಭೂತ, ನ್ಯಾಯಯುತ ಹಕ್ಕನ್ನು ಪಡೆದುಕೊಳ್ಳಲು ಜ.23ರ ಗುರುವಾರ ಬೆಳಗ್ಗೆ 11 ಗಂಟೆಗೆ ಕೋಲಾರ-ಬಂಗಾರಪೇಟೆ
ಮುಖ್ಯರಸ್ತೆ ಬೀರಂಡಹಳ್ಳಿ ಗೇಟ.ರಾಜ್ಯ ಹೆದ್ದಾರಿಯನ್ನು ತಲೆಯ.ಮೇಲೆ ಕಲ್ಲು ಕಣ್ಣಿಗೆ ಬಟ್ಟಿ ಕಟ್ಟಿಕೊಂಡು ಬಂದ್ ಮಾಡಿ ನ್ಯಾಯ ಪಡೆದುಕೊಳ್ಳುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದರು.

ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ನಳಿನಿಗೌಡ, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತಾ.ಅಧ್ಯಕ್ಷ ಅಪ್ಪೋಜಿರಾವ್, ಲಕ್ಷ್ಮಣ್, ಕಿರಣ್, ಚಾಂದ್ ಪಾಷ, ಪುತ್ತೇರಿ ರಾಜು, ಗಿರೀಶ್, ಮುನಿರಾಜು, ಸುಪ್ರೀಂಚಲ, ತೆರ್ನಹಳ್ಳಿ ಆಂಜಿನಪ್ಪ, ಹೆಬ್ಬಣಿ ಆನಂದರೆಡ್ಡಿ, ವಿನೋದ್, ಗಂಗಾಧರ್, ಶೈಲಜ, ರತ್ನಮ್ಮ, ವೆಂಕಟಮ್ಮ, ಗೌರಮ್ಮ, ಸುಮಿತ್ರ ಮುಂತಾದವರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

6 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

23 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago