Categories: ಕೋಲಾರ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿ: ಭೂಮಿ ಕಳೆದುಕೊಂಡ ರೈತರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ ಚುಕ್ಕನಹಳ್ಳಿ, ಏತರನಹಳ್ಳಿ ರೈತರ ೨ನೇ ಕಂತಿನ ಮರಗಿಡಗಳ ಪರಿಹಾರವನ್ನು ಬಿಡುಗಡೆ ಮಾಡಿ ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡು ದಶಕ ಕಳೆದರೂ ಮರಗಿಡಗಳ ೨ನೇ ಪರಿಹಾರದ ಜೊತೆಗೆ ಹೆಚ್ಚಿನ ಭೂ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ವಿಫಲವಾಗಿ ರೈತರ ಜೊತೆ ಚೆಲ್ಲಾಟವಾಡುತ್ತಿದ್ದರೂ ನೊಂದ ರೈತರ ಪರ ಧ್ವನಿ ಎತ್ತದ ಜನಪ್ರತಿನಿಧಿಗಳ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ವರ್ಷಗಳಿಂದ ಸ್ವಾಧೀನದಲ್ಲಿರುವ ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿಗೆ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಸ್ವಾಧೀನ ಮಾಡಿಕೊಂಡಂತೆ ಕಂದಾಯ ನಿಯಮದ ಪ್ರಕಾರ ರೈತರಿಗೆ ಪರಿಹಾರವನ್ನು ನೀಡಬೇಕಲ್ಲವೇ ಎಂದು ಪ್ರಶ್ನೆ ಮಾಡುವ ಜೊತೆಗೆ ಕೊಳತೂರಿನಿಂದ ಕೆಜಿಎಫ್ ವರೆಗಿನ ರೈತರಿಗೆ ಹೆಚ್ಚಿನ ಭೂ ಪರಿಹಾರ ನೀಡಲು ಯಾವುದೇ ವರದಿ ಬೇಕಾಗಿಲ್ಲ. ಆದರೆ, ಗಡಿಭಾಗದ ರೈತರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಪ್ರತಿಯೊಂದಕ್ಕೂ ವರದಿ ವರದಿ ಎಂದು ಅಮಾಯಕ ರೈತರನ್ನು ಬೇರೆ ರಾಜ್ಯದ ರೈತರೆಂದು ಕಾಣುತ್ತಿರುವುದು ನ್ಯಾಯವೇ ಎಂದರು.

ಪರಿಹಾರ ವಂಚಿತ ನೊಂದ ರೈತರಾದ ಜನಾರ್ಧನ್ ಹಾಗೂ ರಾಜಣ್ಣ ಮಾತನಾಡಿ, ಇರುವ 2-3 ಎಕರೆ ಕೃಷಿ ಜಮೀನನ್ನು ಅಧಿಕಾರಿಗಳು ಕಾನೂನಿನ ಭಯ ಹುಟ್ಟಿಸಿ ಬಲವಂತವಾಗಿ ಭೂ ಸ್ವಾಧೀನ ಮಾಡಿಕೊಂಡು ಭಿಕ್ಷುಕರ  ರೀತಿಯಲ್ಲಿ ಪ್ರತಿ ಎಕರೆಗೆ 3.80 ಲಕ್ಷ ರೂ. ಪರಿಹಾರ ನೀಡಿ ಕೈತೊಳೆದುಕೊಂಡಿದ್ದಾರೆ. ಹೆಚ್ಚಿನ ಪರಿಹಾರ ಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಪರಿಹಾರ ಹೆಚ್ಚಿಗೆ ನೀಡುವ ನಿರೀಕ್ಷೆಯಲ್ಲಿದ್ದ ನಮಗೆ ಮಾನ್ಯರು ತಾಲೂಕು ಆಡಳಿತ ಮತ್ತು ಸರ್ವೇ ಇಲಾಖೆಯಿಂದ ವರದಿ ಕೇಳಿದ್ದು, ಆ ವರದಿಯನ್ನು 4 ತಿಂಗಳಿಂದ ನೀಡದೆ ಮುಳಬಾಗಲು ತಾಲೂಕು ಆಡಳಿತ, ಸರ್ವೇ ಇಲಾಖೆ ರೈತರನ್ನು ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿದರು.

ಒಂದು ಕಡೆ ಹೆಚ್ಚಿನ ಪರಿಹಾರವೂ ಇಲ್ಲ, ಮತ್ತೊಂದು ಕಡೆ ಭೂಸ್ವಾಧೀನವಾದ ಜಮೀನಿನಲ್ಲಿದ್ದ ಮರಗಿಡಗಳ 2ನೇ ಕಂತಿನ 1.17 ಕೋಟಿ ಚಿತ್ತೂರು ಪಿಡಿ ಖಾತೆಯಲ್ಲಿರುವ ಹಣ ಬಿಡುಗಡೆ ಪ್ರಕರಣವೂ ಸಹ ಜಿಲ್ಲಾಧಿಕಾರಿಗಳ ಅಂಗಳದಲ್ಲಿದ್ದು, ಕೂಡಲೇ ಮಾನ್ಯರು ಎರಡೂ ಪ್ರಕರಣಗಳನ್ನು ಕಾನೂನಿನ ಪ್ರಕಾರ ಬಗೆಹರಿಸಿ ನ್ಯಾಯ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಅವರು, ನಿಮ್ಮ ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಚಂಗೇಗೌಡ, ರಾಜಣ್ಣ, ನಟರಾಜ್, ವಿಶ್ವ, ವಿ.ಸಿ.ವೆಂಕಟರವಣಪ್ಪ, ಕುಮಾರ್ ಮುಂತಾದವರಿದ್ದರು.

Ramesh Babu

Journalist

Recent Posts

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

28 minutes ago

ಯುಗಾದಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಇಸ್ಪೀಟ್ ಆಟ:‌ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಠಾಣೆಗೆ ಕರೆತಂದಿದ್ದವರ ಪೈಕಿ ಕಾಂತರಾಜು ಅನುಮಾನಾಸ್ಪದ ಸಾವು: ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ…

6 hours ago

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

1 day ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

1 day ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

1 day ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

1 day ago