ಕೋಲಾರ: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ ಚುಕ್ಕನಹಳ್ಳಿ, ಏತರನಹಳ್ಳಿ ರೈತರ ೨ನೇ ಕಂತಿನ ಮರಗಿಡಗಳ ಪರಿಹಾರವನ್ನು ಬಿಡುಗಡೆ ಮಾಡಿ ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡು ದಶಕ ಕಳೆದರೂ ಮರಗಿಡಗಳ ೨ನೇ ಪರಿಹಾರದ ಜೊತೆಗೆ ಹೆಚ್ಚಿನ ಭೂ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ವಿಫಲವಾಗಿ ರೈತರ ಜೊತೆ ಚೆಲ್ಲಾಟವಾಡುತ್ತಿದ್ದರೂ ನೊಂದ ರೈತರ ಪರ ಧ್ವನಿ ಎತ್ತದ ಜನಪ್ರತಿನಿಧಿಗಳ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ವರ್ಷಗಳಿಂದ ಸ್ವಾಧೀನದಲ್ಲಿರುವ ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿಗೆ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಸ್ವಾಧೀನ ಮಾಡಿಕೊಂಡಂತೆ ಕಂದಾಯ ನಿಯಮದ ಪ್ರಕಾರ ರೈತರಿಗೆ ಪರಿಹಾರವನ್ನು ನೀಡಬೇಕಲ್ಲವೇ ಎಂದು ಪ್ರಶ್ನೆ ಮಾಡುವ ಜೊತೆಗೆ ಕೊಳತೂರಿನಿಂದ ಕೆಜಿಎಫ್ ವರೆಗಿನ ರೈತರಿಗೆ ಹೆಚ್ಚಿನ ಭೂ ಪರಿಹಾರ ನೀಡಲು ಯಾವುದೇ ವರದಿ ಬೇಕಾಗಿಲ್ಲ. ಆದರೆ, ಗಡಿಭಾಗದ ರೈತರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಪ್ರತಿಯೊಂದಕ್ಕೂ ವರದಿ ವರದಿ ಎಂದು ಅಮಾಯಕ ರೈತರನ್ನು ಬೇರೆ ರಾಜ್ಯದ ರೈತರೆಂದು ಕಾಣುತ್ತಿರುವುದು ನ್ಯಾಯವೇ ಎಂದರು.
ಪರಿಹಾರ ವಂಚಿತ ನೊಂದ ರೈತರಾದ ಜನಾರ್ಧನ್ ಹಾಗೂ ರಾಜಣ್ಣ ಮಾತನಾಡಿ, ಇರುವ 2-3 ಎಕರೆ ಕೃಷಿ ಜಮೀನನ್ನು ಅಧಿಕಾರಿಗಳು ಕಾನೂನಿನ ಭಯ ಹುಟ್ಟಿಸಿ ಬಲವಂತವಾಗಿ ಭೂ ಸ್ವಾಧೀನ ಮಾಡಿಕೊಂಡು ಭಿಕ್ಷುಕರ ರೀತಿಯಲ್ಲಿ ಪ್ರತಿ ಎಕರೆಗೆ 3.80 ಲಕ್ಷ ರೂ. ಪರಿಹಾರ ನೀಡಿ ಕೈತೊಳೆದುಕೊಂಡಿದ್ದಾರೆ. ಹೆಚ್ಚಿನ ಪರಿಹಾರ ಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಪರಿಹಾರ ಹೆಚ್ಚಿಗೆ ನೀಡುವ ನಿರೀಕ್ಷೆಯಲ್ಲಿದ್ದ ನಮಗೆ ಮಾನ್ಯರು ತಾಲೂಕು ಆಡಳಿತ ಮತ್ತು ಸರ್ವೇ ಇಲಾಖೆಯಿಂದ ವರದಿ ಕೇಳಿದ್ದು, ಆ ವರದಿಯನ್ನು 4 ತಿಂಗಳಿಂದ ನೀಡದೆ ಮುಳಬಾಗಲು ತಾಲೂಕು ಆಡಳಿತ, ಸರ್ವೇ ಇಲಾಖೆ ರೈತರನ್ನು ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿದರು.
ಒಂದು ಕಡೆ ಹೆಚ್ಚಿನ ಪರಿಹಾರವೂ ಇಲ್ಲ, ಮತ್ತೊಂದು ಕಡೆ ಭೂಸ್ವಾಧೀನವಾದ ಜಮೀನಿನಲ್ಲಿದ್ದ ಮರಗಿಡಗಳ 2ನೇ ಕಂತಿನ 1.17 ಕೋಟಿ ಚಿತ್ತೂರು ಪಿಡಿ ಖಾತೆಯಲ್ಲಿರುವ ಹಣ ಬಿಡುಗಡೆ ಪ್ರಕರಣವೂ ಸಹ ಜಿಲ್ಲಾಧಿಕಾರಿಗಳ ಅಂಗಳದಲ್ಲಿದ್ದು, ಕೂಡಲೇ ಮಾನ್ಯರು ಎರಡೂ ಪ್ರಕರಣಗಳನ್ನು ಕಾನೂನಿನ ಪ್ರಕಾರ ಬಗೆಹರಿಸಿ ನ್ಯಾಯ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಅವರು, ನಿಮ್ಮ ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.
ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಚಂಗೇಗೌಡ, ರಾಜಣ್ಣ, ನಟರಾಜ್, ವಿಶ್ವ, ವಿ.ಸಿ.ವೆಂಕಟರವಣಪ್ಪ, ಕುಮಾರ್ ಮುಂತಾದವರಿದ್ದರು.
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…