Categories: ಕೋಲಾರ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿ: ಭೂಮಿ ಕಳೆದುಕೊಂಡ ರೈತರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ ಚುಕ್ಕನಹಳ್ಳಿ, ಏತರನಹಳ್ಳಿ ರೈತರ ೨ನೇ ಕಂತಿನ ಮರಗಿಡಗಳ ಪರಿಹಾರವನ್ನು ಬಿಡುಗಡೆ ಮಾಡಿ ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರೈತಸಂಘದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡು ದಶಕ ಕಳೆದರೂ ಮರಗಿಡಗಳ ೨ನೇ ಪರಿಹಾರದ ಜೊತೆಗೆ ಹೆಚ್ಚಿನ ಭೂ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ವಿಫಲವಾಗಿ ರೈತರ ಜೊತೆ ಚೆಲ್ಲಾಟವಾಡುತ್ತಿದ್ದರೂ ನೊಂದ ರೈತರ ಪರ ಧ್ವನಿ ಎತ್ತದ ಜನಪ್ರತಿನಿಧಿಗಳ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ವರ್ಷಗಳಿಂದ ಸ್ವಾಧೀನದಲ್ಲಿರುವ ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿಗೆ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಸ್ವಾಧೀನ ಮಾಡಿಕೊಂಡಂತೆ ಕಂದಾಯ ನಿಯಮದ ಪ್ರಕಾರ ರೈತರಿಗೆ ಪರಿಹಾರವನ್ನು ನೀಡಬೇಕಲ್ಲವೇ ಎಂದು ಪ್ರಶ್ನೆ ಮಾಡುವ ಜೊತೆಗೆ ಕೊಳತೂರಿನಿಂದ ಕೆಜಿಎಫ್ ವರೆಗಿನ ರೈತರಿಗೆ ಹೆಚ್ಚಿನ ಭೂ ಪರಿಹಾರ ನೀಡಲು ಯಾವುದೇ ವರದಿ ಬೇಕಾಗಿಲ್ಲ. ಆದರೆ, ಗಡಿಭಾಗದ ರೈತರು ಏನು ಪಾಪ ಮಾಡಿದ್ದಾರೋ ಗೊತ್ತಿಲ್ಲ. ಪ್ರತಿಯೊಂದಕ್ಕೂ ವರದಿ ವರದಿ ಎಂದು ಅಮಾಯಕ ರೈತರನ್ನು ಬೇರೆ ರಾಜ್ಯದ ರೈತರೆಂದು ಕಾಣುತ್ತಿರುವುದು ನ್ಯಾಯವೇ ಎಂದರು.

ಪರಿಹಾರ ವಂಚಿತ ನೊಂದ ರೈತರಾದ ಜನಾರ್ಧನ್ ಹಾಗೂ ರಾಜಣ್ಣ ಮಾತನಾಡಿ, ಇರುವ 2-3 ಎಕರೆ ಕೃಷಿ ಜಮೀನನ್ನು ಅಧಿಕಾರಿಗಳು ಕಾನೂನಿನ ಭಯ ಹುಟ್ಟಿಸಿ ಬಲವಂತವಾಗಿ ಭೂ ಸ್ವಾಧೀನ ಮಾಡಿಕೊಂಡು ಭಿಕ್ಷುಕರ  ರೀತಿಯಲ್ಲಿ ಪ್ರತಿ ಎಕರೆಗೆ 3.80 ಲಕ್ಷ ರೂ. ಪರಿಹಾರ ನೀಡಿ ಕೈತೊಳೆದುಕೊಂಡಿದ್ದಾರೆ. ಹೆಚ್ಚಿನ ಪರಿಹಾರ ಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಪರಿಹಾರ ಹೆಚ್ಚಿಗೆ ನೀಡುವ ನಿರೀಕ್ಷೆಯಲ್ಲಿದ್ದ ನಮಗೆ ಮಾನ್ಯರು ತಾಲೂಕು ಆಡಳಿತ ಮತ್ತು ಸರ್ವೇ ಇಲಾಖೆಯಿಂದ ವರದಿ ಕೇಳಿದ್ದು, ಆ ವರದಿಯನ್ನು 4 ತಿಂಗಳಿಂದ ನೀಡದೆ ಮುಳಬಾಗಲು ತಾಲೂಕು ಆಡಳಿತ, ಸರ್ವೇ ಇಲಾಖೆ ರೈತರನ್ನು ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿದರು.

ಒಂದು ಕಡೆ ಹೆಚ್ಚಿನ ಪರಿಹಾರವೂ ಇಲ್ಲ, ಮತ್ತೊಂದು ಕಡೆ ಭೂಸ್ವಾಧೀನವಾದ ಜಮೀನಿನಲ್ಲಿದ್ದ ಮರಗಿಡಗಳ 2ನೇ ಕಂತಿನ 1.17 ಕೋಟಿ ಚಿತ್ತೂರು ಪಿಡಿ ಖಾತೆಯಲ್ಲಿರುವ ಹಣ ಬಿಡುಗಡೆ ಪ್ರಕರಣವೂ ಸಹ ಜಿಲ್ಲಾಧಿಕಾರಿಗಳ ಅಂಗಳದಲ್ಲಿದ್ದು, ಕೂಡಲೇ ಮಾನ್ಯರು ಎರಡೂ ಪ್ರಕರಣಗಳನ್ನು ಕಾನೂನಿನ ಪ್ರಕಾರ ಬಗೆಹರಿಸಿ ನ್ಯಾಯ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಅವರು, ನಿಮ್ಮ ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ವರದಿ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಚಂಗೇಗೌಡ, ರಾಜಣ್ಣ, ನಟರಾಜ್, ವಿಶ್ವ, ವಿ.ಸಿ.ವೆಂಕಟರವಣಪ್ಪ, ಕುಮಾರ್ ಮುಂತಾದವರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

15 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago