ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ನ ಸಂಘಟಿತ ಹೋರಾಟದ ಫಲವಾಗಿ ಚೆನ್ನೈ ನ ಚೆಪಾಕ್ ಕ್ರೀಡಾಂಗಣದಲ್ಲಿ 17 ವಷ೯ (6150) ದಿನಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ಸ್ ಕಿಂಗ್ಸ್ ವಿರುದ್ಧ 50 ರನ್ ಗೆಲುವು ಸಾಧಿಸಿತು.
ಟಾಸ್ ಸೋತು ಬೌಲಿಂಗ್ ಆಯ್ಕೆ ಮಾಡಿದ ನಾಯಕ ರುತುರಾಜ್ ಗಾಯಕ್ವಾಡ್ ನಿರ್ಧಾರ ಸರಿಯಾಗಿರಲಿಲ್ಲ, ಆರ್ ಸಿ ಬಿ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಆರಂಭ ನೀಡಿದರು.
ನಂತರ ಬಂದ ದೆವದತ್ತ ಪಡಿಕಲ್(27) ಹಾಗೂ ನಾಯಕ ರಜತ್ ಪಾಟಿದರ್ ಆಕರ್ಷಕ ಅರ್ಧಶತಕ (51) ಹಾಗೂ ಕೊನೆಯಲ್ಲಿ ಬಂದ ಟೀಮ್ ಡೇವಿಡ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 22 ರನ್ ಪೇರಿಸಿ ತಂಡದ ಮೊತ್ತವನ್ನು 196 ರನ್ ಪೇರಿಸಿದರು.
ಬೃಹತ್ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಘಾತ ಅನುಭವಿಸಿತು, ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ (5) ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ (0) ಹೆಜಲ್ವುಡ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ದೀಪಕ್ ಹೂಡ, ಸ್ಯಾಮ್ ಕರನ್ ಹಾಗೂ ಶಿವಂ ದುಬೆ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು.
ಆರ್ ಸಿಬಿ ಪರವಾಗಿ ವೇಗಿ ಜೋಶ್ ಹೆಜಲ್ವುಡ್ ಮೂರು ವಿಕೆಟ್ ಪಡೆದರು, ಯಶ್ ದಯಾಳ್ ಹಾಗೂ ಲಿವಿಂಗ್ ಸ್ಟನ್ ತಲಾ ಎರಡು ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ಮಿಂಚಿದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…