Categories: IPL 2025

ಚೆಪಾಕ್ ನಲ್ಲಿ 17 ವಷ೯ಗಳ ನಂತರ ಗೆದ್ದ ಆರ್ ಸಿಬಿ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ನ ಸಂಘಟಿತ ಹೋರಾಟದ ಫಲವಾಗಿ ಚೆನ್ನೈ ನ ಚೆಪಾಕ್ ಕ್ರೀಡಾಂಗಣದಲ್ಲಿ 17 ವಷ೯ (6150) ದಿನಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ಸ್ ಕಿಂಗ್ಸ್ ವಿರುದ್ಧ 50 ರನ್ ಗೆಲುವು ಸಾಧಿಸಿತು.

ಟಾಸ್ ಸೋತು ಬೌಲಿಂಗ್ ಆಯ್ಕೆ ಮಾಡಿದ ನಾಯಕ ರುತುರಾಜ್ ಗಾಯಕ್ವಾಡ್ ನಿರ್ಧಾರ ಸರಿಯಾಗಿರಲಿಲ್ಲ, ಆರ್ ಸಿ ಬಿ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಆರಂಭ ನೀಡಿದರು.

ನಂತರ ಬಂದ ದೆವದತ್ತ ಪಡಿಕಲ್(27) ಹಾಗೂ ನಾಯಕ ರಜತ್ ಪಾಟಿದರ್ ಆಕರ್ಷಕ ಅರ್ಧಶತಕ (51) ಹಾಗೂ ಕೊನೆಯಲ್ಲಿ ಬಂದ ಟೀಮ್ ಡೇವಿಡ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 22 ರನ್ ಪೇರಿಸಿ ತಂಡದ ಮೊತ್ತವನ್ನು 196 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಘಾತ ಅನುಭವಿಸಿತು, ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ (5) ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ (0) ಹೆಜಲ್ವುಡ್ ಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ದೀಪಕ್ ಹೂಡ, ಸ್ಯಾಮ್ ಕರನ್ ಹಾಗೂ ಶಿವಂ ದುಬೆ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು.

ಆರ್ ಸಿಬಿ ಪರವಾಗಿ ವೇಗಿ ಜೋಶ್ ಹೆಜಲ್ವುಡ್ ಮೂರು ವಿಕೆಟ್ ಪಡೆದರು, ಯಶ್ ದಯಾಳ್ ಹಾಗೂ ಲಿವಿಂಗ್ ಸ್ಟನ್ ತಲಾ ಎರಡು ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

8 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago