ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ನ ಸಂಘಟಿತ ಹೋರಾಟದ ಫಲವಾಗಿ ಚೆನ್ನೈ ನ ಚೆಪಾಕ್ ಕ್ರೀಡಾಂಗಣದಲ್ಲಿ 17 ವಷ೯ (6150) ದಿನಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ಸ್ ಕಿಂಗ್ಸ್ ವಿರುದ್ಧ 50 ರನ್ ಗೆಲುವು ಸಾಧಿಸಿತು.
ಟಾಸ್ ಸೋತು ಬೌಲಿಂಗ್ ಆಯ್ಕೆ ಮಾಡಿದ ನಾಯಕ ರುತುರಾಜ್ ಗಾಯಕ್ವಾಡ್ ನಿರ್ಧಾರ ಸರಿಯಾಗಿರಲಿಲ್ಲ, ಆರ್ ಸಿ ಬಿ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಆರಂಭ ನೀಡಿದರು.
ನಂತರ ಬಂದ ದೆವದತ್ತ ಪಡಿಕಲ್(27) ಹಾಗೂ ನಾಯಕ ರಜತ್ ಪಾಟಿದರ್ ಆಕರ್ಷಕ ಅರ್ಧಶತಕ (51) ಹಾಗೂ ಕೊನೆಯಲ್ಲಿ ಬಂದ ಟೀಮ್ ಡೇವಿಡ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 22 ರನ್ ಪೇರಿಸಿ ತಂಡದ ಮೊತ್ತವನ್ನು 196 ರನ್ ಪೇರಿಸಿದರು.
ಬೃಹತ್ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಘಾತ ಅನುಭವಿಸಿತು, ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ (5) ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ (0) ಹೆಜಲ್ವುಡ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ದೀಪಕ್ ಹೂಡ, ಸ್ಯಾಮ್ ಕರನ್ ಹಾಗೂ ಶಿವಂ ದುಬೆ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು.
ಆರ್ ಸಿಬಿ ಪರವಾಗಿ ವೇಗಿ ಜೋಶ್ ಹೆಜಲ್ವುಡ್ ಮೂರು ವಿಕೆಟ್ ಪಡೆದರು, ಯಶ್ ದಯಾಳ್ ಹಾಗೂ ಲಿವಿಂಗ್ ಸ್ಟನ್ ತಲಾ ಎರಡು ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ಮಿಂಚಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…