Categories: IPL 2025

ಚೆಪಾಕ್ ನಲ್ಲಿ 17 ವಷ೯ಗಳ ನಂತರ ಗೆದ್ದ ಆರ್ ಸಿಬಿ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ನ ಸಂಘಟಿತ ಹೋರಾಟದ ಫಲವಾಗಿ ಚೆನ್ನೈ ನ ಚೆಪಾಕ್ ಕ್ರೀಡಾಂಗಣದಲ್ಲಿ 17 ವಷ೯ (6150) ದಿನಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ಸ್ ಕಿಂಗ್ಸ್ ವಿರುದ್ಧ 50 ರನ್ ಗೆಲುವು ಸಾಧಿಸಿತು.

ಟಾಸ್ ಸೋತು ಬೌಲಿಂಗ್ ಆಯ್ಕೆ ಮಾಡಿದ ನಾಯಕ ರುತುರಾಜ್ ಗಾಯಕ್ವಾಡ್ ನಿರ್ಧಾರ ಸರಿಯಾಗಿರಲಿಲ್ಲ, ಆರ್ ಸಿ ಬಿ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಆರಂಭ ನೀಡಿದರು.

ನಂತರ ಬಂದ ದೆವದತ್ತ ಪಡಿಕಲ್(27) ಹಾಗೂ ನಾಯಕ ರಜತ್ ಪಾಟಿದರ್ ಆಕರ್ಷಕ ಅರ್ಧಶತಕ (51) ಹಾಗೂ ಕೊನೆಯಲ್ಲಿ ಬಂದ ಟೀಮ್ ಡೇವಿಡ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 22 ರನ್ ಪೇರಿಸಿ ತಂಡದ ಮೊತ್ತವನ್ನು 196 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಘಾತ ಅನುಭವಿಸಿತು, ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ (5) ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ (0) ಹೆಜಲ್ವುಡ್ ಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ದೀಪಕ್ ಹೂಡ, ಸ್ಯಾಮ್ ಕರನ್ ಹಾಗೂ ಶಿವಂ ದುಬೆ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು.

ಆರ್ ಸಿಬಿ ಪರವಾಗಿ ವೇಗಿ ಜೋಶ್ ಹೆಜಲ್ವುಡ್ ಮೂರು ವಿಕೆಟ್ ಪಡೆದರು, ಯಶ್ ದಯಾಳ್ ಹಾಗೂ ಲಿವಿಂಗ್ ಸ್ಟನ್ ತಲಾ ಎರಡು ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

11 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

17 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

20 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

21 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

23 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago