ಚೆಸ್ ವಿಶ್ವಕಪ್ ಗೆದ್ದ ನಾರ್ವೆಯ ಮ್ಯಾಗ್ನಸ್‌ ಕಾರ್ಲ್ಸನ್‌: ರನ್ನರ್ ಅಪ್ ಸ್ಥಾನ ಪಡೆದ ಭಾರತದ ಆರ್‌. ಪ್ರಜ್ಞಾನಂದ

ಎಲ್ಲರ ಚಿತ್ತ ಚೆಸ್ ವಿಶ್ವಕಪ್ ನತ್ತ. ಅತೀವ ಕುತೂಹಲ ಮೂಡಿಸಿದ್ದ ಚೆಸ್‌ ವಿಶ್ವಕಪ್-2023 ಪಂದ್ಯಾವಳಿಯು ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿ ನಿರಾಸೆ ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.

ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ 2ನೇ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾ ದೊಂದಿಗೆ ಅಂತ್ಯಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.

ಇಂದು ನಡೆದ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಲಾಯಿತು. ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋಲಿಗೆ ಶರಣಾಗಬೇಕಾಯಿತು. ಫ್ಯಾಬಿಯಾನೋ ಕರುವಾನಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಚಾಂಪಿಯನ್​ ಪಟ್ಟ ಅಲಂಕರಿಸಿದ ಕಾರ್ಲ್‌ಸನ್‌ ಗೆ $110,000 (₹90, 93,551) ಲಕ್ಷ ರೂಪಾಯಿ ಪಡೆಯಲಿದ್ದಾರೆ. ರನ್ನರ್ ಅಪ್ ಸ್ಥಾನ ಪಡೆದ ಪ್ರಜ್ಞಾನಂದ ಅವರಿಗೆ $80,000 (₹66,13,444) ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆಯಲಿದ್ದಾರೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 hour ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

6 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

9 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago