ಚೆಸ್ ವಿಶ್ವಕಪ್ ಗೆದ್ದ ನಾರ್ವೆಯ ಮ್ಯಾಗ್ನಸ್‌ ಕಾರ್ಲ್ಸನ್‌: ರನ್ನರ್ ಅಪ್ ಸ್ಥಾನ ಪಡೆದ ಭಾರತದ ಆರ್‌. ಪ್ರಜ್ಞಾನಂದ

ಎಲ್ಲರ ಚಿತ್ತ ಚೆಸ್ ವಿಶ್ವಕಪ್ ನತ್ತ. ಅತೀವ ಕುತೂಹಲ ಮೂಡಿಸಿದ್ದ ಚೆಸ್‌ ವಿಶ್ವಕಪ್-2023 ಪಂದ್ಯಾವಳಿಯು ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿ ನಿರಾಸೆ ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.

ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ 2ನೇ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾ ದೊಂದಿಗೆ ಅಂತ್ಯಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.

ಇಂದು ನಡೆದ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಲಾಯಿತು. ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋಲಿಗೆ ಶರಣಾಗಬೇಕಾಯಿತು. ಫ್ಯಾಬಿಯಾನೋ ಕರುವಾನಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಚಾಂಪಿಯನ್​ ಪಟ್ಟ ಅಲಂಕರಿಸಿದ ಕಾರ್ಲ್‌ಸನ್‌ ಗೆ $110,000 (₹90, 93,551) ಲಕ್ಷ ರೂಪಾಯಿ ಪಡೆಯಲಿದ್ದಾರೆ. ರನ್ನರ್ ಅಪ್ ಸ್ಥಾನ ಪಡೆದ ಪ್ರಜ್ಞಾನಂದ ಅವರಿಗೆ $80,000 (₹66,13,444) ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆಯಲಿದ್ದಾರೆ.

Ramesh Babu

Journalist

Recent Posts

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 hour ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

2 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

2 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

6 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

8 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

9 hours ago