ಚೆಸ್ ವಿಶ್ವಕಪ್ ಗೆದ್ದ ನಾರ್ವೆಯ ಮ್ಯಾಗ್ನಸ್‌ ಕಾರ್ಲ್ಸನ್‌: ರನ್ನರ್ ಅಪ್ ಸ್ಥಾನ ಪಡೆದ ಭಾರತದ ಆರ್‌. ಪ್ರಜ್ಞಾನಂದ

ಎಲ್ಲರ ಚಿತ್ತ ಚೆಸ್ ವಿಶ್ವಕಪ್ ನತ್ತ. ಅತೀವ ಕುತೂಹಲ ಮೂಡಿಸಿದ್ದ ಚೆಸ್‌ ವಿಶ್ವಕಪ್-2023 ಪಂದ್ಯಾವಳಿಯು ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿ ನಿರಾಸೆ ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.

ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ 2ನೇ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾ ದೊಂದಿಗೆ ಅಂತ್ಯಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.

ಇಂದು ನಡೆದ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಲಾಯಿತು. ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋಲಿಗೆ ಶರಣಾಗಬೇಕಾಯಿತು. ಫ್ಯಾಬಿಯಾನೋ ಕರುವಾನಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಚಾಂಪಿಯನ್​ ಪಟ್ಟ ಅಲಂಕರಿಸಿದ ಕಾರ್ಲ್‌ಸನ್‌ ಗೆ $110,000 (₹90, 93,551) ಲಕ್ಷ ರೂಪಾಯಿ ಪಡೆಯಲಿದ್ದಾರೆ. ರನ್ನರ್ ಅಪ್ ಸ್ಥಾನ ಪಡೆದ ಪ್ರಜ್ಞಾನಂದ ಅವರಿಗೆ $80,000 (₹66,13,444) ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆಯಲಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

4 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

23 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago