ಚೊಚ್ಚಲ ಮಹಿಳಾ U-19 ವಿಶ್ವಕಪ್ ಗೆದ್ದ ಭಾರತ, ದಿಗ್ಗಜರ ಸಾಲಿಗೆ ಸೇರಿದ ಶೆಫಾಲಿ!

ಐಸಿಸಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಹತ್ತೊಂಭತ್ತು ವರ್ಷದೊಳಗಿನ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶೆಫಾಲಿ ವರ್ಮಾ ನಾಯಕತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿಯೂ ಅಬ್ಬರದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ಶೆಫಾಲಿ ಪಡೆ ಹೊಸ ಇತಿಹಾಸ ಬರೆಯುವ ಮೂಲಕ ನಾಯಕಿ ಶೆಫಾಲಿ ಕಪಿಲ್ ದೇವ್, ಮಹೇಂದ್ರ ಸಿಂಗ್ ದೋನಿ, ವಿರಾಟ್ ಕೊಹ್ಲಿ ರಂತಹ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಎದುರಾಳಿಗಳಿಗೆ ಮೇಲೆಳಲು ಬಿಡಲೇ ಇಲ್ಲ, ಉತ್ತಮ ಬೌಲಿಂಗ್ ಪ್ರದರ್ಶಿಸಿ 68 ರನ್ ಗಳಿಗೆ ಎದುರಾಳಿಗಳನ್ನು ಆಲೌಟ್ ಮಾಡುವ ಮೂಲಕ ಸುಲಭದ ಗೆಲುವಿಗೆ ಅಡಿಪಾಯ ಹಾಕಿದರು.

ಭಾರತದ ಪರವಾಗಿ ಸೌಮ್ಯ ತಿವಾರಿ (24) ಹಾಗೂ ಗೊಂಗಾಡಿ ತ್ರಿಷಾ (24) ಅವರ ಸಂಘಟಿತ ಹೋರಾಟದ ಫಲವಾಗಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಸಾಧಿಸುವ ಮೂಲಕ ನಾಯಕಿಯ ಹುಟ್ಟು ಹಬ್ಬಕ್ಕೆ ಉಡುಗೊರೆ ನೀಡಿದರು.

ಕಳೆದ ವರ್ಷ ನಡೆದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ಸೋತು ಕಣ್ಣೀರಿಟ್ಟಿದ್ದ ಶೆಫಾಲಿ ವರ್ಮಾ ನಾಯಕಿಯಾಗಿ ಅಂಡರ್ 19 ವಿಶ್ವಕಪ್ ಗೆದ್ದು ಆ ನೋವನ್ನು ಮರೆತರು, ಜೊತೆಗೆ ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ, ಪೃಥ್ವಿ ಶಾ, ಉನ್ಮಕ್ ಚಂದ್ ಹಾಗೂ ಯಶ್ ಧೂಳ್ ಅವರ ಸಾಲಿಗೆ ಸೇರ್ಪಡೆಯಾಗುವ ಮೂಲಕ ಐಸಿಸಿ ಟ್ರೊಫಿ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 hour ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago