ಚೊಚ್ಚಲ ಮಹಿಳಾ U-19 ವಿಶ್ವಕಪ್ ಗೆದ್ದ ಭಾರತ, ದಿಗ್ಗಜರ ಸಾಲಿಗೆ ಸೇರಿದ ಶೆಫಾಲಿ!

ಐಸಿಸಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಹತ್ತೊಂಭತ್ತು ವರ್ಷದೊಳಗಿನ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶೆಫಾಲಿ ವರ್ಮಾ ನಾಯಕತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿಯೂ ಅಬ್ಬರದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ಶೆಫಾಲಿ ಪಡೆ ಹೊಸ ಇತಿಹಾಸ ಬರೆಯುವ ಮೂಲಕ ನಾಯಕಿ ಶೆಫಾಲಿ ಕಪಿಲ್ ದೇವ್, ಮಹೇಂದ್ರ ಸಿಂಗ್ ದೋನಿ, ವಿರಾಟ್ ಕೊಹ್ಲಿ ರಂತಹ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡ ಎದುರಾಳಿಗಳಿಗೆ ಮೇಲೆಳಲು ಬಿಡಲೇ ಇಲ್ಲ, ಉತ್ತಮ ಬೌಲಿಂಗ್ ಪ್ರದರ್ಶಿಸಿ 68 ರನ್ ಗಳಿಗೆ ಎದುರಾಳಿಗಳನ್ನು ಆಲೌಟ್ ಮಾಡುವ ಮೂಲಕ ಸುಲಭದ ಗೆಲುವಿಗೆ ಅಡಿಪಾಯ ಹಾಕಿದರು.

ಭಾರತದ ಪರವಾಗಿ ಸೌಮ್ಯ ತಿವಾರಿ (24) ಹಾಗೂ ಗೊಂಗಾಡಿ ತ್ರಿಷಾ (24) ಅವರ ಸಂಘಟಿತ ಹೋರಾಟದ ಫಲವಾಗಿ ಭಾರತ ತಂಡ 7 ವಿಕೆಟ್‌ಗಳಿಂದ ಗೆಲುವು ಸಾಧಿಸುವ ಮೂಲಕ ನಾಯಕಿಯ ಹುಟ್ಟು ಹಬ್ಬಕ್ಕೆ ಉಡುಗೊರೆ ನೀಡಿದರು.

ಕಳೆದ ವರ್ಷ ನಡೆದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ಸೋತು ಕಣ್ಣೀರಿಟ್ಟಿದ್ದ ಶೆಫಾಲಿ ವರ್ಮಾ ನಾಯಕಿಯಾಗಿ ಅಂಡರ್ 19 ವಿಶ್ವಕಪ್ ಗೆದ್ದು ಆ ನೋವನ್ನು ಮರೆತರು, ಜೊತೆಗೆ ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ, ಪೃಥ್ವಿ ಶಾ, ಉನ್ಮಕ್ ಚಂದ್ ಹಾಗೂ ಯಶ್ ಧೂಳ್ ಅವರ ಸಾಲಿಗೆ ಸೇರ್ಪಡೆಯಾಗುವ ಮೂಲಕ ಐಸಿಸಿ ಟ್ರೊಫಿ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

2 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

18 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

18 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

18 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

23 hours ago