Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

4 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

11 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

17 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago