Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

6 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

17 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

17 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

23 hours ago