Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

10 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

10 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago