Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

5 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago