Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago