Categories: ಲೇಖನ

ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ?, ತಿನ್ನುವ ಆಹಾರಕ್ಕೋ ?

ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5000 ದಷ್ಟು, ಆಕೆಯ ಬ್ಯೂಟಿ ಪಾರ್ಲರ್ ಖರ್ಚು ತಿಂಗಳಿಗೆ 5000 ವಾಗುತ್ತದೆ, ಆಕೆ ಓಡಾಡುವ ಕಾರಿನ ಬೆಲೆ 8/10 ಲಕ್ಷಗಳು, ಆಕೆಯ ಗಂಡ ಒಬ್ಬ ಬಿಸಿನೆಸ್ ಮನ್, ಆತ ಓಡಾಡುವುದು 50 ಲಕ್ಷದ ಕಾರಿನಲ್ಲಿ, ಪ್ರತಿಷ್ಟಿತ ಕ್ಲಬ್ ನ ಸದಸ್ಯನಾದ ಆತನ ತಿಂಗಳ ಸಾಮಾನ್ಯ ಖರ್ಚಿನ ಸರಾಸರಿ ಕ್ಲಬ್ ಬಿಲ್ 30000, ಆತನ ಒಬ್ಬನೇ ಮಗನ ಶಾಲೆಯ Fees ವಾರ್ಷಿಕ 2 ಲಕ್ಷಕ್ಕೂ ಹೆಚ್ಚು, ಅವರ ಮನೆಯ ನಾಯಿ ಮತ್ತು ಸೆಕ್ಯುರಿಟಿಗಾಗಿ ತಿಂಗಳಿಗೆ 20000 ಕ್ಕೂ ಹೆಚ್ಚು ಖರ್ಚು ಮಾಡುತ್ತಾರೆ. ಆತನ ವ್ಯವಾಹಾರದ ವಾರ್ಷಿಕ ಆದಾಯ ಅಧಿಕೃತವಾಗಿಯೇ 3 ಕೋಟಿ, ಇದೆಲ್ಲಾ ಅವರ ಕುಟುಂಬದ ಶ್ರೀಮಂತಿಕೆಯ ಕೆಲವು ಮೇಲ್ನೋಟದ ಲಕ್ಷಣಗಳು…….

ಇತ್ತ ತಳ್ಳುಗಾಡಿಯಲ್ಲಿ ಒಬ್ಬ ವ್ಯಕ್ತಿ ದಿನವೂ ಪ್ರೆಶ್ ತರಕಾರಿ ಮಾರುತ್ತಾ ಅವರ ಮನೆಯ ಬಳಿ ಬರುತ್ತಾನೆ. ಅವರು ಎಷ್ಟೇ ಶ್ರೀಮಂತರಾದರೂ ಮೊದಲಿನಿಂದಲೂ ಇವನ ಬಳಿಯೇ ತರಕಾರಿ ಕೊಳ್ಳುವ ಅಭ್ಯಾಸ ರೂಡಿಸಿಕೊಂಡಿದ್ದಾರೆ……

ಬೃಹತ್‌ ಬಂಗಲೆಯ ಮೊದಲನೇ ಮಹಡಿಯಲ್ಲಿ ನಿಲ್ಲುವ ಆಕೆ ತರಕಾರಿ ತರಲು ಕೆಳಕ್ಕೆ ಅವರ ಮನೆಯ ಕೆಲಸದಾಕೆಯನ್ನು ಕಳಿಸುತ್ತಾಳೆ……

ಆಕೆ ಮಾತ್ರ ಮಹಡಿಯ ಮೇಲಿನಿಂದಲೆ ಕೇಳುತ್ತಾಳೆ…. “ನಿಂಬೆ ಹಣ್ಣು ಎಷ್ಟು”

ಆತ: ” ಹತ್ತು ರೂಪಾಯಿಗೆ ಎರಡು ”

ಆಕೆ: “ಅಯ್ಯೋ ಅಷ್ಟೊಂದ…. ನಮಗೆ ಹತ್ತು ರೂಪಾಯಿಗೆ 3 ಕೊಡು. ಆಮೇಲೆ ಪಾಲಾಕ್ ಸೊಪ್ಪು ಎಷ್ಟು”

ಆತ: ” ಅಮ್ಮ ಕಟ್ಟು 25 ರೂಪಾಯಿ ”

ಆಕೆ: “ಅಬ್ಬಬ್ಬಾ ಯಾಕಪ್ಪಾ ಅಷ್ಟೊಂದು ರೇಟ್ ಹೇಳ್ತೀಯ… 20 ರೂಪಾಯಿ ಮಾಡ್ಕೋ, ಕೊತ್ತಂಬರಿ ಎಷ್ಟು ”

ಆತ: ” ಅಮ್ಮ ಅದು ಕಟ್ಟು ಹತ್ತು ರೂಪಾಯಿ ”

ಆಕೆ: ” ಓಹೋ ತುಂಬಾ ಜಾಸ್ತಿಯಾಯ್ತು,
ನಾವು ಬದುಕೋದು ಹೇಗೆ.. ಈರಳ್ಳಿ, ಬದನೆಕಾಯಿ, ಆಲೂಗಡ್ಡೆ ಎಲ್ಲಾ ರೇಟ್ ಕಡಿಮೆ ಮಾಡ್ಕೊಂಡು ಒಂದೊಂದು ಕೆಜಿ ಕೊಡು. ನಾವು ಮಾಮೂಲಿ ಗಿರಾಕಿ ಅಲ್ವ. ನಾಳೆಯಿಂದ ತಗೊಬೇಕೊ ಬೇಡ್ವೋ ಹೇಳು”

ಆತ: ” ಅಮ್ಮ ನಾನು ನಿಮಗೆ ಸುಳ್ಳು ಹೇಳೋದಿಲ್ಲ. ಮಾರ್ಕೆಟ್ಟಿನಲ್ಲಿ ಇರೋದೆ ಅಷ್ಟು. ನಮಗೂ ಏನೂ ಗಿಟ್ಟೋದಿಲ್ಲ. ಹೆಚ್ಚು ಕಡಿಮೆ ಮಾಡಿ ಹಾಕ್ಕೊಡ್ತಿನಿ.”

ಬೇಕಾದ ತರಕಾರಿ ಎಲ್ಲಾ ತೆಗೆದುಕೊಂಡ ಕೆಲಸದಾಕೆ, “ಅಮ್ಮಾ ಒಟ್ಟು 160 ಆಯ್ತುಂತೆ ” ಎಂದು ಮೇಲಕ್ಕೆ ತಿರುಗಿ ಕೂಗುತ್ತಾಳೆ…..

ಆಕೆ: ” ತಗೋ 150 “ಎಂದು ಅದರಲ್ಲೂ ಚೌಕಾಸಿ ಮಾಡಿ ಮೇಲಿನಿಂದ 100 + 50 ರ ಎರಡು ನೋಟು ಮಡಿಚಿ ಎಸೆಯುತ್ತಾಳೆ….

ಅವರ ಬಂಗಲೆಯ ಮುಂದಿನ ಸಣ್ಣ ಕೊಠಡಿಯಲ್ಲಿ ವಾಸಿಸುವ ನಾನು ಕಿಟಕಿಯಲ್ಲಿ ಬೆಳಗ್ಗೆ ಹಲ್ಲುಜ್ಜುತ್ತಾ ಈ ದೃಶ್ಯ ನೋಡುತ್ತಿರುತ್ತೇನೆ……

ಇದನ್ನು ಹೇಗೆಂದು ಅರ್ಥೈಸುವುದು ?,,,..

ಭಾರತೀಯರ ಸಹಜ ಗುಣವೇ ?,

ತಿನ್ನುವ ಆಹಾರದ ಬಗ್ಗೆ ಅಸಡ್ಡೆಯೇ ?,

ಬೆಳೆಯುವ ರೈತನ ಬಗ್ಗೆ ತಿರಸ್ಕಾರವೇ ?,

ಮಾರುವ ವ್ಯಕ್ತಿಯ ಯೋಗ್ಯತೆಯ ನಿರ್ಧಾರವೇ ?,

ವ್ಯಾವಹಾರಿಕ ಕುಶಲತೆಯೇ ?,

ಹಣ ಉಳಿಸುವ ಜಾಣತನವೇ ?,

ಅಥವಾ

ಮಾನಸಿಕ ಅಸ್ವಸ್ಥತೆಯೇ ?,

ಬೆಲೆ ಕೊಡಬೇಕಾಗಿರುವುದು – ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ ?,

ಅಥವಾ,

ತಿನ್ನುವ ಆಹಾರಕ್ಕೋ ?,

ಗೊಂದಲದಲ್ಲಿದ್ದೇನೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

6 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

6 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago