Categories: ಲೇಖನ

ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ?, ತಿನ್ನುವ ಆಹಾರಕ್ಕೋ ?

ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5000 ದಷ್ಟು, ಆಕೆಯ ಬ್ಯೂಟಿ ಪಾರ್ಲರ್ ಖರ್ಚು ತಿಂಗಳಿಗೆ 5000 ವಾಗುತ್ತದೆ, ಆಕೆ ಓಡಾಡುವ ಕಾರಿನ ಬೆಲೆ 8/10 ಲಕ್ಷಗಳು, ಆಕೆಯ ಗಂಡ ಒಬ್ಬ ಬಿಸಿನೆಸ್ ಮನ್, ಆತ ಓಡಾಡುವುದು 50 ಲಕ್ಷದ ಕಾರಿನಲ್ಲಿ, ಪ್ರತಿಷ್ಟಿತ ಕ್ಲಬ್ ನ ಸದಸ್ಯನಾದ ಆತನ ತಿಂಗಳ ಸಾಮಾನ್ಯ ಖರ್ಚಿನ ಸರಾಸರಿ ಕ್ಲಬ್ ಬಿಲ್ 30000, ಆತನ ಒಬ್ಬನೇ ಮಗನ ಶಾಲೆಯ Fees ವಾರ್ಷಿಕ 2 ಲಕ್ಷಕ್ಕೂ ಹೆಚ್ಚು, ಅವರ ಮನೆಯ ನಾಯಿ ಮತ್ತು ಸೆಕ್ಯುರಿಟಿಗಾಗಿ ತಿಂಗಳಿಗೆ 20000 ಕ್ಕೂ ಹೆಚ್ಚು ಖರ್ಚು ಮಾಡುತ್ತಾರೆ. ಆತನ ವ್ಯವಾಹಾರದ ವಾರ್ಷಿಕ ಆದಾಯ ಅಧಿಕೃತವಾಗಿಯೇ 3 ಕೋಟಿ, ಇದೆಲ್ಲಾ ಅವರ ಕುಟುಂಬದ ಶ್ರೀಮಂತಿಕೆಯ ಕೆಲವು ಮೇಲ್ನೋಟದ ಲಕ್ಷಣಗಳು…….

ಇತ್ತ ತಳ್ಳುಗಾಡಿಯಲ್ಲಿ ಒಬ್ಬ ವ್ಯಕ್ತಿ ದಿನವೂ ಪ್ರೆಶ್ ತರಕಾರಿ ಮಾರುತ್ತಾ ಅವರ ಮನೆಯ ಬಳಿ ಬರುತ್ತಾನೆ. ಅವರು ಎಷ್ಟೇ ಶ್ರೀಮಂತರಾದರೂ ಮೊದಲಿನಿಂದಲೂ ಇವನ ಬಳಿಯೇ ತರಕಾರಿ ಕೊಳ್ಳುವ ಅಭ್ಯಾಸ ರೂಡಿಸಿಕೊಂಡಿದ್ದಾರೆ……

ಬೃಹತ್‌ ಬಂಗಲೆಯ ಮೊದಲನೇ ಮಹಡಿಯಲ್ಲಿ ನಿಲ್ಲುವ ಆಕೆ ತರಕಾರಿ ತರಲು ಕೆಳಕ್ಕೆ ಅವರ ಮನೆಯ ಕೆಲಸದಾಕೆಯನ್ನು ಕಳಿಸುತ್ತಾಳೆ……

ಆಕೆ ಮಾತ್ರ ಮಹಡಿಯ ಮೇಲಿನಿಂದಲೆ ಕೇಳುತ್ತಾಳೆ…. “ನಿಂಬೆ ಹಣ್ಣು ಎಷ್ಟು”

ಆತ: ” ಹತ್ತು ರೂಪಾಯಿಗೆ ಎರಡು ”

ಆಕೆ: “ಅಯ್ಯೋ ಅಷ್ಟೊಂದ…. ನಮಗೆ ಹತ್ತು ರೂಪಾಯಿಗೆ 3 ಕೊಡು. ಆಮೇಲೆ ಪಾಲಾಕ್ ಸೊಪ್ಪು ಎಷ್ಟು”

ಆತ: ” ಅಮ್ಮ ಕಟ್ಟು 25 ರೂಪಾಯಿ ”

ಆಕೆ: “ಅಬ್ಬಬ್ಬಾ ಯಾಕಪ್ಪಾ ಅಷ್ಟೊಂದು ರೇಟ್ ಹೇಳ್ತೀಯ… 20 ರೂಪಾಯಿ ಮಾಡ್ಕೋ, ಕೊತ್ತಂಬರಿ ಎಷ್ಟು ”

ಆತ: ” ಅಮ್ಮ ಅದು ಕಟ್ಟು ಹತ್ತು ರೂಪಾಯಿ ”

ಆಕೆ: ” ಓಹೋ ತುಂಬಾ ಜಾಸ್ತಿಯಾಯ್ತು,
ನಾವು ಬದುಕೋದು ಹೇಗೆ.. ಈರಳ್ಳಿ, ಬದನೆಕಾಯಿ, ಆಲೂಗಡ್ಡೆ ಎಲ್ಲಾ ರೇಟ್ ಕಡಿಮೆ ಮಾಡ್ಕೊಂಡು ಒಂದೊಂದು ಕೆಜಿ ಕೊಡು. ನಾವು ಮಾಮೂಲಿ ಗಿರಾಕಿ ಅಲ್ವ. ನಾಳೆಯಿಂದ ತಗೊಬೇಕೊ ಬೇಡ್ವೋ ಹೇಳು”

ಆತ: ” ಅಮ್ಮ ನಾನು ನಿಮಗೆ ಸುಳ್ಳು ಹೇಳೋದಿಲ್ಲ. ಮಾರ್ಕೆಟ್ಟಿನಲ್ಲಿ ಇರೋದೆ ಅಷ್ಟು. ನಮಗೂ ಏನೂ ಗಿಟ್ಟೋದಿಲ್ಲ. ಹೆಚ್ಚು ಕಡಿಮೆ ಮಾಡಿ ಹಾಕ್ಕೊಡ್ತಿನಿ.”

ಬೇಕಾದ ತರಕಾರಿ ಎಲ್ಲಾ ತೆಗೆದುಕೊಂಡ ಕೆಲಸದಾಕೆ, “ಅಮ್ಮಾ ಒಟ್ಟು 160 ಆಯ್ತುಂತೆ ” ಎಂದು ಮೇಲಕ್ಕೆ ತಿರುಗಿ ಕೂಗುತ್ತಾಳೆ…..

ಆಕೆ: ” ತಗೋ 150 “ಎಂದು ಅದರಲ್ಲೂ ಚೌಕಾಸಿ ಮಾಡಿ ಮೇಲಿನಿಂದ 100 + 50 ರ ಎರಡು ನೋಟು ಮಡಿಚಿ ಎಸೆಯುತ್ತಾಳೆ….

ಅವರ ಬಂಗಲೆಯ ಮುಂದಿನ ಸಣ್ಣ ಕೊಠಡಿಯಲ್ಲಿ ವಾಸಿಸುವ ನಾನು ಕಿಟಕಿಯಲ್ಲಿ ಬೆಳಗ್ಗೆ ಹಲ್ಲುಜ್ಜುತ್ತಾ ಈ ದೃಶ್ಯ ನೋಡುತ್ತಿರುತ್ತೇನೆ……

ಇದನ್ನು ಹೇಗೆಂದು ಅರ್ಥೈಸುವುದು ?,,,..

ಭಾರತೀಯರ ಸಹಜ ಗುಣವೇ ?,

ತಿನ್ನುವ ಆಹಾರದ ಬಗ್ಗೆ ಅಸಡ್ಡೆಯೇ ?,

ಬೆಳೆಯುವ ರೈತನ ಬಗ್ಗೆ ತಿರಸ್ಕಾರವೇ ?,

ಮಾರುವ ವ್ಯಕ್ತಿಯ ಯೋಗ್ಯತೆಯ ನಿರ್ಧಾರವೇ ?,

ವ್ಯಾವಹಾರಿಕ ಕುಶಲತೆಯೇ ?,

ಹಣ ಉಳಿಸುವ ಜಾಣತನವೇ ?,

ಅಥವಾ

ಮಾನಸಿಕ ಅಸ್ವಸ್ಥತೆಯೇ ?,

ಬೆಲೆ ಕೊಡಬೇಕಾಗಿರುವುದು – ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ ?,

ಅಥವಾ,

ತಿನ್ನುವ ಆಹಾರಕ್ಕೋ ?,

ಗೊಂದಲದಲ್ಲಿದ್ದೇನೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago