Categories: ಲೇಖನ

ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ?, ತಿನ್ನುವ ಆಹಾರಕ್ಕೋ ?

ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5000 ದಷ್ಟು, ಆಕೆಯ ಬ್ಯೂಟಿ ಪಾರ್ಲರ್ ಖರ್ಚು ತಿಂಗಳಿಗೆ 5000 ವಾಗುತ್ತದೆ, ಆಕೆ ಓಡಾಡುವ ಕಾರಿನ ಬೆಲೆ 8/10 ಲಕ್ಷಗಳು, ಆಕೆಯ ಗಂಡ ಒಬ್ಬ ಬಿಸಿನೆಸ್ ಮನ್, ಆತ ಓಡಾಡುವುದು 50 ಲಕ್ಷದ ಕಾರಿನಲ್ಲಿ, ಪ್ರತಿಷ್ಟಿತ ಕ್ಲಬ್ ನ ಸದಸ್ಯನಾದ ಆತನ ತಿಂಗಳ ಸಾಮಾನ್ಯ ಖರ್ಚಿನ ಸರಾಸರಿ ಕ್ಲಬ್ ಬಿಲ್ 30000, ಆತನ ಒಬ್ಬನೇ ಮಗನ ಶಾಲೆಯ Fees ವಾರ್ಷಿಕ 2 ಲಕ್ಷಕ್ಕೂ ಹೆಚ್ಚು, ಅವರ ಮನೆಯ ನಾಯಿ ಮತ್ತು ಸೆಕ್ಯುರಿಟಿಗಾಗಿ ತಿಂಗಳಿಗೆ 20000 ಕ್ಕೂ ಹೆಚ್ಚು ಖರ್ಚು ಮಾಡುತ್ತಾರೆ. ಆತನ ವ್ಯವಾಹಾರದ ವಾರ್ಷಿಕ ಆದಾಯ ಅಧಿಕೃತವಾಗಿಯೇ 3 ಕೋಟಿ, ಇದೆಲ್ಲಾ ಅವರ ಕುಟುಂಬದ ಶ್ರೀಮಂತಿಕೆಯ ಕೆಲವು ಮೇಲ್ನೋಟದ ಲಕ್ಷಣಗಳು…….

ಇತ್ತ ತಳ್ಳುಗಾಡಿಯಲ್ಲಿ ಒಬ್ಬ ವ್ಯಕ್ತಿ ದಿನವೂ ಪ್ರೆಶ್ ತರಕಾರಿ ಮಾರುತ್ತಾ ಅವರ ಮನೆಯ ಬಳಿ ಬರುತ್ತಾನೆ. ಅವರು ಎಷ್ಟೇ ಶ್ರೀಮಂತರಾದರೂ ಮೊದಲಿನಿಂದಲೂ ಇವನ ಬಳಿಯೇ ತರಕಾರಿ ಕೊಳ್ಳುವ ಅಭ್ಯಾಸ ರೂಡಿಸಿಕೊಂಡಿದ್ದಾರೆ……

ಬೃಹತ್‌ ಬಂಗಲೆಯ ಮೊದಲನೇ ಮಹಡಿಯಲ್ಲಿ ನಿಲ್ಲುವ ಆಕೆ ತರಕಾರಿ ತರಲು ಕೆಳಕ್ಕೆ ಅವರ ಮನೆಯ ಕೆಲಸದಾಕೆಯನ್ನು ಕಳಿಸುತ್ತಾಳೆ……

ಆಕೆ ಮಾತ್ರ ಮಹಡಿಯ ಮೇಲಿನಿಂದಲೆ ಕೇಳುತ್ತಾಳೆ…. “ನಿಂಬೆ ಹಣ್ಣು ಎಷ್ಟು”

ಆತ: ” ಹತ್ತು ರೂಪಾಯಿಗೆ ಎರಡು ”

ಆಕೆ: “ಅಯ್ಯೋ ಅಷ್ಟೊಂದ…. ನಮಗೆ ಹತ್ತು ರೂಪಾಯಿಗೆ 3 ಕೊಡು. ಆಮೇಲೆ ಪಾಲಾಕ್ ಸೊಪ್ಪು ಎಷ್ಟು”

ಆತ: ” ಅಮ್ಮ ಕಟ್ಟು 25 ರೂಪಾಯಿ ”

ಆಕೆ: “ಅಬ್ಬಬ್ಬಾ ಯಾಕಪ್ಪಾ ಅಷ್ಟೊಂದು ರೇಟ್ ಹೇಳ್ತೀಯ… 20 ರೂಪಾಯಿ ಮಾಡ್ಕೋ, ಕೊತ್ತಂಬರಿ ಎಷ್ಟು ”

ಆತ: ” ಅಮ್ಮ ಅದು ಕಟ್ಟು ಹತ್ತು ರೂಪಾಯಿ ”

ಆಕೆ: ” ಓಹೋ ತುಂಬಾ ಜಾಸ್ತಿಯಾಯ್ತು,
ನಾವು ಬದುಕೋದು ಹೇಗೆ.. ಈರಳ್ಳಿ, ಬದನೆಕಾಯಿ, ಆಲೂಗಡ್ಡೆ ಎಲ್ಲಾ ರೇಟ್ ಕಡಿಮೆ ಮಾಡ್ಕೊಂಡು ಒಂದೊಂದು ಕೆಜಿ ಕೊಡು. ನಾವು ಮಾಮೂಲಿ ಗಿರಾಕಿ ಅಲ್ವ. ನಾಳೆಯಿಂದ ತಗೊಬೇಕೊ ಬೇಡ್ವೋ ಹೇಳು”

ಆತ: ” ಅಮ್ಮ ನಾನು ನಿಮಗೆ ಸುಳ್ಳು ಹೇಳೋದಿಲ್ಲ. ಮಾರ್ಕೆಟ್ಟಿನಲ್ಲಿ ಇರೋದೆ ಅಷ್ಟು. ನಮಗೂ ಏನೂ ಗಿಟ್ಟೋದಿಲ್ಲ. ಹೆಚ್ಚು ಕಡಿಮೆ ಮಾಡಿ ಹಾಕ್ಕೊಡ್ತಿನಿ.”

ಬೇಕಾದ ತರಕಾರಿ ಎಲ್ಲಾ ತೆಗೆದುಕೊಂಡ ಕೆಲಸದಾಕೆ, “ಅಮ್ಮಾ ಒಟ್ಟು 160 ಆಯ್ತುಂತೆ ” ಎಂದು ಮೇಲಕ್ಕೆ ತಿರುಗಿ ಕೂಗುತ್ತಾಳೆ…..

ಆಕೆ: ” ತಗೋ 150 “ಎಂದು ಅದರಲ್ಲೂ ಚೌಕಾಸಿ ಮಾಡಿ ಮೇಲಿನಿಂದ 100 + 50 ರ ಎರಡು ನೋಟು ಮಡಿಚಿ ಎಸೆಯುತ್ತಾಳೆ….

ಅವರ ಬಂಗಲೆಯ ಮುಂದಿನ ಸಣ್ಣ ಕೊಠಡಿಯಲ್ಲಿ ವಾಸಿಸುವ ನಾನು ಕಿಟಕಿಯಲ್ಲಿ ಬೆಳಗ್ಗೆ ಹಲ್ಲುಜ್ಜುತ್ತಾ ಈ ದೃಶ್ಯ ನೋಡುತ್ತಿರುತ್ತೇನೆ……

ಇದನ್ನು ಹೇಗೆಂದು ಅರ್ಥೈಸುವುದು ?,,,..

ಭಾರತೀಯರ ಸಹಜ ಗುಣವೇ ?,

ತಿನ್ನುವ ಆಹಾರದ ಬಗ್ಗೆ ಅಸಡ್ಡೆಯೇ ?,

ಬೆಳೆಯುವ ರೈತನ ಬಗ್ಗೆ ತಿರಸ್ಕಾರವೇ ?,

ಮಾರುವ ವ್ಯಕ್ತಿಯ ಯೋಗ್ಯತೆಯ ನಿರ್ಧಾರವೇ ?,

ವ್ಯಾವಹಾರಿಕ ಕುಶಲತೆಯೇ ?,

ಹಣ ಉಳಿಸುವ ಜಾಣತನವೇ ?,

ಅಥವಾ

ಮಾನಸಿಕ ಅಸ್ವಸ್ಥತೆಯೇ ?,

ಬೆಲೆ ಕೊಡಬೇಕಾಗಿರುವುದು – ಚೌಕಾಸಿ ಮಾಡಬೇಕಾಗಿರುವುದು ಆಡಂಬರದ ಒಣ ಪ್ರದರ್ಶನದ ವಸ್ತುಗಳಿಗೋ ?,

ಅಥವಾ,

ತಿನ್ನುವ ಆಹಾರಕ್ಕೋ ?,

ಗೊಂದಲದಲ್ಲಿದ್ದೇನೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

24 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago