ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ‌ ಸೊಣ್ಣಪ್ಪನಹಳ್ಳಿ ರಮೇಶ್ ನೇಮಕ

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.

ರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಪತ್ರವನ್ನು ನೀಡಿದ್ದಾರೆ ಎಂದು ಛಲವಾದಿ ಮುಖಂಡರಾದ ಗೂಳ್ಯ ಹನುಮಣ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಮಾಹಿತಿ ನೀಡಿದ ಅವರು, ಕಳೆದ ಹಲವು ವರ್ಷಗಳಿಂದ ಸಮುದಾಯದ ಕೆಲಸಗಳನ್ನು ನಾವು ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ತಮ್ಮ ಕಚೇರಿಗೆ ಕರೆಸಿಕೊಂಡ ಸಿದ್ದಯ್ಯನವರು ಕಳೆದ ಕೆಲ ವರ್ಷಗಳಿಂದ ತಾಲ್ಲೂಕಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ದಿಗಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದರು.

ಛಲವಾದಿ ಹಿರಿಯ ಮುಖಂಡರಾದ ಮರಿಯಪ್ಪ ಮಾತನಾಡಿ, ನಮ್ಮ ಸಮುದಾಯಕ್ಕೆ ಮತ್ತಷ್ಟು ಬಲ ತುಂಬಲು, ಸಮುದಾಯದ ಅಭಿವೃದ್ದಿಗಾಗಿ ತಾಲ್ಲೂಕಿನಲ್ಲಿ ಕೆಲಸ ಮಾಡಲೆಂದು ರಾಜ್ಯಾಧ್ಯಕ್ಷರಾದ ಸಿದ್ದಯ್ಯನವರು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನ ನೇಮಕ ಮಾಡಿ ಆದೇಶಿಸಿದ್ದಾರೆ. ಸದ್ಯ ಅವರ ಬೆಂಬಲಕ್ಕೆ ನಿಂತು ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು.

ಮುಖಂಡರಾದ ಮುನಿರಾಜು ಮಾತನಾಡಿ, ಛಲವಾದಿ ಮಹಾಸಭಾವು ನಮ್ಮ ತಾಲ್ಲೂಕಿನಲ್ಲಿ ಕಳೆದ 20 ವರ್ಷಗಳಿಂದ ಉತ್ತಮವಾಗಿ ಸಮುದಾಯದ ಸೇವೆಯನ್ನು ಮಾಡಿಕೊಂಡು ಬಂದಿದೆ. ಇತ್ತೀಚೆಗೆ ತಾಲೂಕಿನ ಕೆಲ ಮುಖಂಡರು ಸಮುದಾಯವನ್ನು ಕಡೆಗಣಿಸಿದ್ದನ್ನು ಮನಗಂಡ ರಾಜ್ಯಮಟ್ಟದ ನಾಯಕರು ಇದೀಗ ಸಮುದಾಯದ ಬೆಳವಣಿಗೆಗಾಗಿ ನೂತನ ಅಧ್ಯಕ್ಷರನ್ನಾಗಿ ರಮೇಶ್ ಅವರನ್ನು ನೇಮಕ ಮಾಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಂಡು ಇನ್ನು ಮುಂದೆ ತಾಲ್ಲೂಕಿನಲ್ಲಿರುವ ಸಮುದಾಯದ ಜನತೆಗೆ ಸರ್ಕಾರದಿಂದ ಸಿಗಬೇಕಾದ ಸೇವೆಗಳನ್ನು ಸಿಗುವಂತೆ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ನೂತನ ತಾಲ್ಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಛಲವಾದಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಇನ್ನು ಮುಂದೆಯೂ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ರಾಜ್ಯಾಧ್ಯಕ್ಷರು ನನ್ನ ಮೇಲೆ ಇರಿಸಿರುವ ನಂಬಿಕೆಯನ್ನು ಉಳಿಸಿಕೊಂಡು ತಾಲೂಕಿನ ಜನತೆಯ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನೂತನ ತಾಲ್ಲೂಕು ಅಧ್ಯಕ್ಷರನ್ನು ಸಮುದಾಯದ ಮುಖಂಡರು ಹಾರ ಹಾಕಿ ಶಾಲು ಹಾಕಿ ಸನ್ಮಾನಿಸಿದರು.

ಈ ವೇಳೆ ರಮೇಶ್, ಅಜಯ್ ಕುಮಾರ್, ತಳಗವಾರ ಸತೀಶ್, ಸೇರಿದಂತೆ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago